Advertisement

ಜಮ್ಮು-ಕಾಶ್ಮೀರ: ಜಂಟಿ ಕಾರ್ಯಾಚರಣೆ, ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ

01:24 PM Dec 30, 2020 | Team Udayavani |

ಶ್ರೀನಗರ್: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಗೀಡಾಗಿರುವ ಘಟನೆ ಶ್ರೀನಗರದ ಲಾವಾಪೋರಾ ಪ್ರದೇಶದಲ್ಲಿ ಬುಧವಾರ(ಡಿಸೆಂಬರ್ 30, 2020) ನಡೆದಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಮೂಲಗಳು ತಿಳಿಸಿವೆ.

Advertisement

ಕಾಶ್ಮೀರ ವಲಯ ಪೊಲೀಸ್ ವರದಿ ಪ್ರಕಾರ, ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು ಎಂದು ವರದಿ ಹೇಳಿದೆ.

ಸೇನೆ ಮತ್ತು ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು, ಬುಧವಾರ (ಡಿಸೆಂಬರ್ 30) ಬೆಳಗ್ಗೆವರೆಗೂ ಗುಂಡಿನ ಚಕಮಕಿ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ರಾತ್ರಿ ಕರ್ಫ್ಯೂ ವಿಚಾರ: ಸಚಿವರುಗಳ ಭಿನ್ನ ಹೇಳಿಕೆ, ಬಗೆಹರಿಯದ ಗೊಂದಲ!

ಇತ್ತೀಚೆಗೆ ಜಮ್ಮು-ಕಾಶ್ಮೀರ ಹಾಗೂ ಗಡಿ ಪ್ರದೇಶದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಈಗಾಗಲೇ ಉಗ್ರರ ಹಲವು ದಾಳಿ ಯತ್ನವನ್ನು ಸೇನಾಪಡೆ ವಿಫಲಗೊಳಿಸಿತ್ತು. ಜಂಟಿ ಕಾರ್ಯಾಚರಣೆ ಎನ್ ಕೌಂಟರ್ ನಲ್ಲಿ ನೂರಾರು ಉಗ್ರರು ಈ ವರ್ಷ ಬಲಿಯಾಗಿದ್ದಾರೆಂದು ವರದಿ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next