Advertisement

ವಿಟ್ಲ: ಗುಡ್ಡ ಜರಿದು 3 ಕಾರ್ಮಿಕರ ಸಾವು ಓರ್ವನ ಸ್ಥಿತಿ ಗಂಭೀರ

10:13 AM Dec 08, 2019 | Team Udayavani |

ವಿಟ್ಲ: ಕಟ್ಟಡ ಕೆಲಸ ಮಾಡುತಿದ್ದ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿ ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ಶನಿವಾರ ಸಂಭವಿಸಿದೆ.

Advertisement

ಘಟನೆಯಲ್ಲಿ ಬಾಳಪ್ಪ, ಪ್ರಕಾಶ್ ಮತ್ತು ರಮೇಶ್ ಮೃತಪಟ್ಟಿದ್ದು ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದು ಕಡೆಯಲ್ಲಿ ಕಟ್ಟಡ ಕಟ್ಟಲು ತೆಗೆಯಲಾಗಿದ್ದ ಪಿಲ್ಲರ್ ಗುಂಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಗುಡ್ಡ ಜರಿದು ಬಿದ್ದಿದೆ.

ಮಣ್ಣಿನಡಿಯಲ್ಲಿ ಸಿಲುಕಿದ ಮೂವರ ಮೃತದೇಹ ಹೊರತೆಗೆಯಲಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next