Advertisement

ರಾಜ್ಯದಲ್ಲಿ ಮತ್ತೆ ಮೂರು ಸೋಂಕು ಪ್ರಕರಣಗಳು: 523ಕ್ಕೇರಿದ ಸೋಂಕಿತರ ಸಂಖ್ಯೆ

09:30 AM Apr 29, 2020 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದಿರಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

Advertisement

ಬಾಗಲಕೋಟೆಯಲ್ಲಿ ಮೂವರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಸೋಂಕಿತ ಸಂಖ್ಯೆ 381ರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಹರಡಿದ್ದರೆ, ಸೋಂಕಿತ ಸಂಖ್ಯೆ 456ರ ದ್ವಿತೀಯ ಸಂಪರ್ಕದಿಂದ 11 ವರ್ಷದ ಬಾಲಕನಿಗೆ ಸೋಂಕು ದೃಢವಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 523 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಲ್ಲಿ 20 ಜನರು ಮರಣ ಹೊಂದಿದ್ದಾರೆ. ಮತ್ತು 207 ಜನರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಇರುವ 295 ವ್ಯಕ್ತಿಗಳಲ್ಲಿ 288 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ಗಳ್ಲಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತು ಏಳು ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next