Advertisement

ಗುರುವಾರದ ರಾಶಿ ಫಲ:ಸಂಸಾರದೊಂದಿಗೆ ದೀರ್ಘ‌ ಪ್ರಯಾಣ, ಪಾಲುದಾರಿಕಾ ವ್ಯವಹಾರಗಳಲ್ಲಿ ಲಾಭ

07:34 AM Nov 10, 2022 | Team Udayavani |

ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

Advertisement

ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.

ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನ ವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.

Advertisement

ಕನ್ಯಾ: ಹೆಚ್ಚಿದ ದೈಹಿಕ ಶ್ರಮ. ಕೌಟುಂಬಿಕ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಸೂಕ್ತ ಸಲಹೆ ಲಭ್ಯ.

ವೃಶ್ಚಿಕ: ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರು ಹಿರಿಯರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ.

ಧನು: ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಂಮೃದ್ಧಿ, ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಮಕ್ಕಳಿಂದ ಅನುರಾಗ ವೃದ್ಧಿ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿ.

ಮೀನ: ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

Advertisement

Udayavani is now on Telegram. Click here to join our channel and stay updated with the latest news.

Next