Advertisement

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

08:06 AM Dec 02, 2021 | Team Udayavani |

ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.

Advertisement

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಹೋದ್ಯೋಗಿಗಳಿಂದ ತಾಳ್ಮೆಯಿಂದ ವರ್ತಿಸಿ. ಹೆಚ್ಚಿನ ನಿರೀಕ್ಷೆ ಸಲ್ಲದು.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆ ಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ, ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ, ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಆಸ್ತಿ ವಿಚಾರದಲ್ಲಿ ತಲ್ಲೀನತೆ.

ಸಿಂಹ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರ ದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನ ಹರಿಸಿ.

Advertisement

ಕನ್ಯಾ: ಸಜ್ಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿನ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.

ತುಲಾ : ಹಠಮಾರಿತನ ಮಾಡದೆ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗÌದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಮಕ್ಕಳಿಂದ ಹೆಚ್ಚಿನ ಸುಖ. ದಂಪತಿಗಳಲ್ಲಿ ಅನ್ಯೋನ್ಯತೆ.

ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಹೆಚ್ಚಿನ ಸುಖ.

ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳು ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿನ ನೆಮ್ಮದಿ.

ಕುಂಭ: ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿನ ಸೌಕರ್ಯ, ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿನ ವರಮಾನ. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರ ರಕ್ಷೆ ಲಭ್ಯ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರ ಗಳಿಂದ ಅನಿರೀಕ್ಷಿತ ಧನಾಗಮ. ಖರ್ಚು ವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ.

Advertisement

Udayavani is now on Telegram. Click here to join our channel and stay updated with the latest news.

Next