Advertisement

224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ: ಪರಮೇಶ್ವರ್

11:28 AM Mar 28, 2018 | Sharanya Alva |

ಬೆಂಗಳೂರು:ಭಾರೀ ಕುತೂಹಲ ಮೂಡಿಸಿರುವ ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯ ಸಿದ್ಧತೆ ನಡೆಯತೊಡಗಿದೆ. ಏತನ್ಮಧ್ಯೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸಂಬಂಧ ಬುಧವಾರ ಇಡೀ ದಿನ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ನಾನು (ಪರಮೇಶ್ವರ್) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜತೆ ಯಾರಿಗೆ ಟಿಕೆಟ್ ನೀಡಬೇಕು, ಏನೇನು ಸಮಸ್ಯೆ ಇದೆ ಎಂಬ ಬಗ್ಗೆ ಚರ್ಚಿಸುವುದಾಗಿ ಹೇಳಿದರು.

ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ವಿವರಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 12ಕ್ಕೆ ಮತದಾನ, ಮೇ 15ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next