Advertisement

ಕ್ಷೇತ್ರವಾರು ಸಮೀಕ್ಷೆ ವರದಿ ಆಧರಿಸಿ ಟಿಕೆಟ್‌: ಈಶ್ವರಪ್ಪ

06:10 AM Feb 02, 2018 | Team Udayavani |

ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ನಡೆಸಿದ್ದು ರಾಜ್ಯದೆಲ್ಲೆಡೆ ಪಕ್ಷದ ಗೆಲುವಿಗೆ ಪೂರಕವಾದ ವಾತಾವರಣ ಇದೆ ಎಂದು ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಇದೆ. ಪಕ್ಷ ಈ ಬಾರಿ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವ ಅನುಮಾನವಿಲ್ಲ. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಯಲ್ಲಿ ಸ್ಪರ್ಧಾಕಾಂಕ್ಷಿ ಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಿದೆ. ಆಂತರಿಕವಾಗಿ ಕ್ಷೇತ್ರವಾರು ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ. ಸಮೀಕ್ಷೆ ವರದಿ ಆಧರಿಸಿ ವರಿಷ್ಠರು ಅಭ್ಯರ್ಥಿಗಳ ಆಯ್ಕೆ ಮಾಡಲಿದ್ದಾರೆ ಎಂದರು.

ಪಕ್ಷದ ವತಿಯಿಂದ ರಾಜ್ಯದ ವಿವಿಧೆಡೆ ಸಮಾವೇಶ ನಡೆಸಲು  ಚಿಂತನೆ ನಡೆಸಲಾಗಿದೆ. ರಾಜ್ಯದ 4 ಸ್ಥಳಗಳಲ್ಲಿ ಪರಿಶಿಷ್ಟ ಜಾತಿ, ವರ್ಗದವರ ಸಮಾವೇಶ ಹಾಗೂ ಶಿವಮೊಗ್ಗ ಸೇರಿದಂತೆ 4 ಸ್ಥಳಗಳಲ್ಲಿ ಮಹಿಳಾ ಸಮಾವೇಶ ನಡೆಯಲಿದೆ. ದಾವಣಗೆರೆಯಲ್ಲಿ ರೈತ ಸಮಾವೇಶ ನಡೆಸಲು ಯೋಚಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next