Advertisement

BJPಯಿಂದ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್‌: ಬಿ.ಎಸ್‌.ಯಡಿಯೂರಪ್ಪ

09:51 PM Apr 07, 2023 | Team Udayavani |

ಬೆಂಗಳೂರು: ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಸಂಸದೀಯ ಮಂಡಳಿ ಸಭೆಗಾಗಿ ದಿಲ್ಲಿಗೆ ತೆರಳುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಕೆಟ್‌ಗಾಗಿ ಬಹಳ ಒತ್ತಡ ಇರುವುದು ನಿಜ. ಆದರೆ ಎಲ್ಲರ ಜತೆ ಚರ್ಚೆ ಮಾಡಿ ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ. ಈಗಾಗಲೇ ಪ್ರತಿ ಕ್ಷೇತ್ರದಿಂದ ಮೂವರ ಹೆಸರು ಕಳುಹಿಸಿದ್ದೇವೆ. ಆದರೆ ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್‌ ಅಂತಿಮಗೊಳಿಸುತ್ತೇವೆ ಎಂದು ಹೇಳಿದರು. ನಾನು, ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಪ್ರಮುಖರು ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ದಿಲ್ಲಿಗೆ ಹೋಗುತ್ತಿದ್ದೇವೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next