Advertisement

ಕೈ ತಪ್ಪಿದ ಟಿಕೆಟ್: “ತಹಶೀಲ್ದಾರ’ಅಸಮಾಧಾನ 

11:25 AM Apr 16, 2018 | |

ಹಾವೇರಿ: ಪಕ್ಷ ನಿಷ್ಠೆಯೇ ನನಗೆ ಇಂದು ಮುಳುವಾಯಿತು ಎಂದು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಮನೋಹರ ತಹಶೀಲ್ದಾರ ಬೇಸರ ವ್ಯಕ್ತಪಡಿಸಿದ್ದಲ್ಲದೇ ತೀವ್ರ ಅಸಮಾಧಾನವನ್ನು ಹೊರ ಹಾಕಿದ್ದಾರೆ.

Advertisement

ನಾನು ಅಪ್ಪಟ ಕಾಂಗ್ರೆಸ್ಸಿಗ ಇದ್ದರೂ ಇದೇ ಪಕ್ಷದಲ್ಲೇ, ಸಾಯುವುದೂ ಕಾಂಗ್ರೆಸ್ಸಿನಲ್ಲೇ, ಆದರೆ ನನಗೆ ಕೊನೆ ಸಮಯದಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇದರ ಹಿಂದೆ ದೊಡ್ಡ ವ್ಯವಸ್ಥಿತ ಷಡ್ಯಂತ್ರ ಇದೆ ಎಂಬ ಅನುಮಾನವನ್ನು ವ್ಯಕ್ತಪಡಿಸಿದರು.

ಎಲ್ಲದಕ್ಕಿಂತ ಮುಖ್ಯವಾಗಿ ನನ್ನ ಬಿಟ್ಟು ಜಿಲ್ಲೆಯಲ್ಲಿನ ಇಲ್ಲವೇ ತಾಲೂಕಿನಲ್ಲಿರುವ ಯಾರಿಗಾದರೂ ಟಿಕೆಟ್ ಕೊಟ್ಟಿದ್ದರೆ ಸಂತೋಷವಿತ್ತು. ಆದರೆ ಬೇರೆ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟಿದ್ದು ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.

ಹಾಗಾಗಿ ಈ ವಿಷಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರನ್ನ ಸೇರಿದಂತೆ ಅವರನ್ನ ಭೇಟಿ ಮಾಡಿ ಚರ್ಚಿಸುವೆ ಮತ್ತು ಪಕ್ಷದ ಕಾರ್ಯಕರ್ತರ ಜೊತೆಯೂ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ನನಗೆ ಟಿಕೆಟ್ ಕೊಡದಿದ್ರೆ ಕ್ಷೇತ್ರದಲ್ಲಿ ಪಕ್ಷಕ್ಕೆ ದೊಡ್ಡ ಏಟು ಬೀಳಲಿದೆ. ಆದರೂ ನನಗೆ ಇನ್ನೂ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.  

Advertisement

Udayavani is now on Telegram. Click here to join our channel and stay updated with the latest news.

Next