Advertisement

ಪ್ರಮೋದ್‌ಗೆ ಟಿಕೆಟ್‌: ಕರ್ನಾಟಕ ಗಂಗಾಮತಸ್ಥರ ಸಂಘ ಆಗ್ರಹ

12:12 AM Jan 03, 2024 | Team Udayavani |

ಬೆಂಗಳೂರು: ಮೀನುಗಾರ ಸಮುದಾಯಕ್ಕೆ ಸೇರಿದ ಪ್ರಮೋದ್‌ ಮಧ್ವರಾಜ್‌ ಅವರಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಕರ್ನಾಟಕ ಗಂಗಾಮತಸ್ಥರ ಸಂಘ ಬಿಜೆಪಿಯನ್ನು ಆಗ್ರಹಿಸಿದೆ.

Advertisement

ಮಂಗಳವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಕರ್ನಾಟಕ ಗಂಗಾಮತಸ್ಥರ ಸಂಘದ ಅಧ್ಯಕ್ಷ ಡಾ| ಬಿ. ಮೌಲಾಲಿ, ಮೀನುಗಾರರ ಸಮಸ್ಯೆ ಹಾಗೂ ಹಿಂದುಳಿದ ವರ್ಗದ ಸಮಸ್ಯೆಗಳ ಬಗ್ಗೆ ಪ್ರಮೋದ್‌ ಮಧ್ವರಾಜ್‌ ಅವರಿಗೆ ಅರಿವಿದೆ. ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಈಗಾಗಲೇ ಸಮಾಜದ ಮುಖಂಡರು ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಹಕ್ಕೊತ್ತಾಯ ಮಾಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next