Advertisement

Udupi: ಟಿಕೆಟ್‌ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ವಶಕ್ಕೆ

08:32 PM Sep 14, 2024 | Team Udayavani |

ಉಡುಪಿ: ರೈಲಿನಲ್ಲಿ ಪ್ರಯಾಣಚೀಟಿ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ-ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಯಾಣಚೀಟಿ ತಪಾಸಣಾಧಿಕಾರಿ ಕೆ. ವಾಸುದೇವ್‌ ಪೈ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ.

Advertisement

ಮಕ್ಕಳನ್ನು ಕಾನೂನು ಪ್ರಕ್ರಿಯೆ ನಡೆಸಲು ರೈಲ್ವೇ ಆರ್‌.ಪಿ.ಎಫ್.ಸುಧೀರ್‌ ಶೆಟ್ಟಿ ಅವರ ಸಮ್ಮುಖದಲ್ಲಿ ಹಾಜರುಪಡಿಸಿದರು. ಬೆಂಗಳೂರು ಮೂಲದ ಇಬ್ಬರೂ ಸಹೋದರ, ಸಹೋದರಿಯರಾಗಿದ್ದರು. ಹೆತ್ತವರಿಗೆ ತಿಳಿಸದೆ ಮನೆಬಿಟ್ಟು ಬಂದಿದ್ದಾರೆ ಎನ್ನಲಾಗಿದೆ.

ವಿಚಾರಣೆ ಪ್ರಕ್ರಿಯೆಗಳು ಮುಗಿದ ಬಳಿಕ ರೈಲ್ವೇ ಪೊಲೀಸರು ಹೆತ್ತವರಿಗೆ ಮಾಹಿತಿ ನೀಡಿದ್ದು, ಮಕ್ಕಳನ್ನು ನಿಟ್ಟೂರಿನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. ಕಾನೂನು ಪ್ರಕ್ರಿಯೆ ಸಂದರ್ಭ ತನಿಖಾಧಿಕಾರಿ ಜಿನಾ ಪಿಂಟೋ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next