Advertisement

ಪ್ಲಾಸ್ಟಿಕ್‌ ಮುಕ್ತ ಭಾರತಕ್ಕೆ ಕೈ ಜೋಡಿಸಿ

12:57 PM Oct 07, 2019 | Suhan S |

ಯರಗಟ್ಟಿ: ರೈನಾಪುರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪ್ಲಾಸ್ಟಿಕ್‌ ಮುಕ್ತ ಸ್ವಚ್ಛ ಗ್ರಾಮ ಕಾರ್ಯಕ್ರಮ ನಡೆಯಿತು. ಈ ವೇಳೆ ಸೂಪ್ಪಡ್ಲ ಗ್ರಾಪಂ ಅಧ್ಯಕ್ಷ ಸುರೇಶ ಬಂಟನೂರ ಮಾತನಾಡಿ, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ಉದ್ದೇಶದಿಂದ ಮತ್ತು ಪ್ಲಾಷ್ಟಿಕ್‌ ಮುಕ್ತ ಗ್ರಾಮಕ್ಕೆ ಯೋಜನೆ ರೂಪಿಸಬೇಕು. ನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್‌ ಬಳಸದೇ ಪರಿಸರ ಸ್ನೇಹಿ ಕೈಚೀಲ ಉಪಯೋಗಿಸಬೇಕು ಎಂದರು.

Advertisement

ಪಿಡಿಒ ಚೌವರಡ್ಡಿ ಮಾತನಾಡಿ, ತಮ್ಮ ಮನೆಯ ನೆರೆ ಹೊರೆಯವರಲ್ಲಿ ಪ್ಲಾಸ್ಟಿಕ್‌ ದುಷ್ಟರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಗ್ರಾಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು. ಗ್ರಾಪಂ ಸದಸ್ಯರಾದ ಅಪ್ಪಣ್ಣ ರವಿ, ಶೋಭಾ ವಿರಕ್ತಮಠ. ಶೋಭಾ ಪೂಜೇರ, ಶುಭಾಸ ಬೆಣಕಟ್ಟಿ, ಕಲ್ಲಪ್ಪ ಕಡೇಮನಿ ಸೇರಿದಂತೆ ಎಸ್‌ ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next