Advertisement

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

01:18 AM Oct 07, 2024 | Team Udayavani |

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ‌ ವಲಯ ವ್ಯಾಪ್ತಿಯಲ್ಲಿ 3 ತಿಂಗಳ ಮರಿಯಾನೆಯೊಂದು ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕುಂದಕೆರೆ‌ ವಲಯ ಅರಣ್ಯ ನೌಕರರು ಗಸ್ತು ತಿರುಗುತ್ತಿದ್ದಾಗ ಮಾಹಿತಿ ದೊರೆತಿದ್ದು, ಅನಂತರ ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಶು ವೈದ್ಯ ಡಾ| ವಾಸೀಂ ಮಿರ್ಜಾ ಸಾವನ್ನಪ್ಪಿದ ಮರಿಯಾನೆ ಶವ ಪರೀಕ್ಷೆ ನಡೆಸಿ, ಪ್ರಯೋಗಾಲಯಕ್ಕೆ ಕಳುಹಿಸಿಕೊಡಲು ಮಾದರಿ ಸಂಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next