Advertisement

ಮಡಿಕೇರಿ: ತೋಟದಲ್ಲಿ ಕಾಡುಕೋಣವನ್ನು ಬೇಟೆಯಾಡಿದ ವ್ಯಾಘ್ರ

11:29 PM Mar 01, 2023 | Team Udayavani |

ಮಡಿಕೇರಿ: ಹುಲಿಯೊಂದು ಕಾಫಿ ತೋಟದಲ್ಲಿ ಕಾಡುಕೋಣವನ್ನು ಬೇಟೆಯಾಡಿರುವ ಘಟನೆ ಪಾಲಿಬೆಟ್ಟ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕಾರ್ಮಿಕರು ಕೆಲಸಕ್ಕೆಂದು ತೋಟಕ್ಕೆ ಆಗಮಿಸಿದ ಸಂದರ್ಭ ಕಾಡುಕೋಣ ಮೃತಪಟ್ಟಿರುವುದು ಕಂಡು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹುಲಿ ದಾಳಿಯ ಕುರಿತು ಸಂಶಯ ವ್ಯಕ್ತಪಡಿಸಿದರು. ಮಂಗಳವಾರ ತಡರಾತ್ರಿ ಕಾಡುಕೋಣದ ಮೇಲೆ ಹುಲಿ ದಾಳಿ ಮಾಡಿರಬಹುದೆಂದು ಅಂದಾಜಿಸಲಾಗಿದೆ.

ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಹುಲಿ ಸಂಚರಿಸುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next