Advertisement

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

02:56 PM Oct 01, 2024 | Team Udayavani |

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ-11 (Bigg Boss Kannada-11) ಆರಂಭಗೊಂಡಿದೆ. ನಾನಾ ಕ್ಷೇತ್ರದ 17ಮಂದಿ ಸ್ಪರ್ಧಿಗಳು ʼಸ್ವರ್ಗ – ನರಕʼದ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ.

Advertisement

ಮೊದಲ ದಿನದಂದಲೇ ಬಿಗ್‌ ಬಾಸ್‌ ಕಾರ್ಯಕ್ರಮ ರಂಗೇರಿದೆ. ಸ್ವರ್ಗ ಹಾಗೂ ನರಕದ ಮನೆಯಲ್ಲಿರುವ ಸ್ಪರ್ಧಿಗಳ ನಡುವೆ ವಾಗ್ವಾದ ಶುರುವಾಗಿದೆ. ಮನೆಯೊಂದು ಬಾಗಿಲು ಎರಡು ಎಂಬಂತೆ ಸ್ವರ್ಗ – ನರಕದ ನಿವಾಸಿಗಳ ನಡುವೆ ಕಿತ್ತಾಟ ಶುರುವಾಗಿದೆ.

ಕಳೆದ ಸೀಸನ್‌ನಲ್ಲಿ ಹುಲಿ ಉಗುರು ಪ್ರಕರಣದಿಂದ ಸದ್ದಾಗಿದ್ದ ಬಿಗ್‌ ಬಾಸ್‌ ಮನೆ ಈ ಬಾರಿಯೂ ಹುಲಿ ಉಗುರಿನ ವಿಚಾರದಿಂದ ಸುದ್ದಿ ಆಗುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಉತ್ತರ ಕರ್ನಾಟಕ ಮೂಲದಿಂದ ಬಂದು ಬಿಗ್‌ ಬಾಸ್‌ ಮನೆಯೊಳಗೆ ಹೋಗಿರುವ ʼಗೋಲ್ಡ್‌ ಸುರೇಶ್‌ʼ.

ಬಿಗ್‌ ಬಾಸ್‌ ಈ ಬಾರಿ ಪ್ರಿಮಿಯರ್‌ ಆಗುವ ಮೊದಲೇ ಕೆಲ ಸ್ಪರ್ಧಿಗಳ ಹೆಸರನ್ನು ರಿವೀಲ್‌ ಮಾಡಿತ್ತು. ಅದರಲ್ಲಿ ಗೌತಮಿ ಜಾಧವ್‌, ಲಾಯರ್‌ ಜಗದೀಶ್‌, ಚೈತ್ರಾ ಕುಂದಾಪುರ ಅವರೊಂದಿಗೆ ʼಗೋಲ್ಡ್‌ ಸುರೇಶ್‌ʼ ಕೂಡ ಇದ್ದರು.

Advertisement

ಬೆಳಗಾವಿ ಮೂಲದವರಾದ ಗೋಲ್ಡ್‌ ಸುರೇಶ್‌ ಮೈತುಂಬಾ ಚಿನ್ನಾಭರಣ ತೊಟ್ಟಿಕೊಂಡೇ ಬಿಗ್‌ ಬಾಸ್‌ ಮನೆಯೊಳಗೆ ಹೋಗಿದ್ದಾರೆ.  ಅವರನ್ನು ನೋಡಿ ಇವರು ವರ್ತೂರು ಸಂತೋಷ್‌ 2.0 ಎಂದು ಕಮೆಂಟ್‌ ಮಾಡಿದ್ದಾರೆ. ಕಳೆದ ಸೀಸನ್‌ನಲ್ಲಿ ವರ್ತೂರು ಸಂತೋಷ್‌ ಕೂಡ ಇದೇ ರೀತಿ ಚಿನ್ನವನ್ನು ಧರಿಸಿಕೊಂಡು ದೊಡ್ಮನೆಯೊಳಗೆ ಹೋಗಿದ್ದರು.

ಆದರೆ ಕೆಲ ಸಮಯದ ಬಳಿಕ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ ಕಾರಣಕ್ಕೆ ಅರಣ್ಯ ಇಲಾಖೆಗೆ ಅಧಿಕಾರಿಗಳ ಅವರ ವಿರುದ್ಧ ದೂರು ದಾಖಲಿಸಿಕೊಂಡು, ಬಿಗ್‌ ಬಾಸ್‌ ಮನೆಯಿಂದಲೇ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಈ ವಿಚಾರ ಎಲ್ಲೆಡೆ ಸುದ್ದಿ ಆಗಿತ್ತು. ವಿಚಾರಣೆ ಎದುರಿಸಿ ವರ್ತೂರು ಸಂತೋಷ್‌ ಮತ್ತೆ ಬಿಗ್‌ ಬಾಸ್‌ ಮನೆಯೊಳಗೆ ಬಂದಿದ್ದರು.

ಆದರೆ ಇದೀಗ ಬಿಗ್‌ ಬಾಸ್‌ ಕನ್ನಡ -11ನಲ್ಲಿ ಸ್ಪರ್ಧಿ ಆಗಿರುವ ʼಗೋಲ್ಡ್‌ ಸುರೇಶ್‌ʼ ಕೂಡ ಚಿನ್ನಾಭರಣಗಳ ಜತೆ ಹುಲಿ ಉಗುರಿನ ಪೆಂಡೆಂಟ್‌ ವೊಂದನ್ನು ಧರಿಸಿದ್ದಾರೆ. ಅವರ ವಿಟಿಯಲ್ಲಿ ಇದನ್ನು ತೋರಿಸಲಾಗಿದೆ. ಇದು ಅಸಲಿಯೂ ಅಥವಾ ನಕಲಿಯೂ ಅಥವಾ ಫೈಬರ್‌ ನದ್ದೂ ಎನ್ನುವ ಪ್ರಶ್ನೆ ಕಾಡಿದೆ.

ವಿಟಿಯಲ್ಲಿ ಹುಲಿ ಉಗುರಿನ ಪೆಂಡೆಂಟ್‌ ತೋರಿಸಲಾಗಿದ್ದು, ಇದನ್ನು ಅವರು ಬಿಗ್‌ ಬಾಸ್‌ ಮನೆಯೊಳಗೆ ತೆಗೆದುಕೊಂಡು ಹೋಗಿದ್ದಾರಾ ಅಥವಾ ತೆಗೆದಿಟ್ಟಿದ್ದಾರಾ ಎನ್ನುವುದನ್ನು ಸ್ಪಷ್ಟ ಪಡಿಸಿಕೊಳ್ಳಲು ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಬಿಗ್‌ ಬಾಸ್‌ ಮನೆಯೊಳಗೆ ಹೋಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದು ಅಸಲಿ ಹುಲಿ ಉಗುರಿನ ಪೆಂಡೆಂಟ್ ವೋ ಅಥವಾ ಪೈಬರ್‌ ರೂಪದಲ್ಲಿರುವ ಪೆಂಡೆಂಟ್‌ ವೋ ಎನ್ನುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕವಷ್ಟೇ ಗೊತ್ತಾಗಲಿದೆ ಎಂದು ʼನ್ಯೂಸ್‌ ಫಸ್ಟ್‌ʼ ವರದಿ ತಿಳಿಸಿದೆ.

ವೈಲ್ಡ್‌ ಲೈಫ್ ಕಾನೂನು ಪ್ರಕಾರ ಹುಲಿ ಉಗುರು ಧರಿಸುವುದು ಅಪರಾಧವಾಗಿದೆ.

ಯಾರು ಈ ಗೋಲ್ಡ್‌ ಸುರೇಶ್?:‌ ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮೊದಲಿನಿಂದಲೂ ಚಿನ್ನಾಭರಣದ ಮೇಲೆ ವ್ಯಾಮೋಹ ಇಟ್ಟುಕೊಂಡಿರುವ ಅದನ್ನು ಸದಾ ಮೈಯಲ್ಲಿ ಧರಿಸಿರುತ್ತಾರೆ. ಆರ್ ಎಸ್‌ ಎಸ್‌ ಪೂರ್ಣವಧಿ ಕಾರ್ಯಕರ್ತನಾಗಿದ್ದ ಸುರೇಶ್‌, ಬಡತನದ ಹಿನ್ನೆಲೆಯಿಂದಲೇ ಬಂದವರು. ನಿರ್ಮಾಣ ಸಂಸ್ಥೆಯನ್ನು ಮುನ್ನಡಿಸಿ ದೊಡ್ಡಮಟ್ಟದ ಯಶಸ್ಸು ಕಂಡವರು. ವಿವಾಹಿತ ಆಗಿರುವ ಇವರು ಒಂದು ಮಗುವಿನ ತಂದೆ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next