Advertisement

ಹೊಕ್ಕಳ್ಳಿ: ಮುಂದುವರೆದ ಹುಲಿ ದಾಳಿ, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲು

07:58 PM Dec 21, 2021 | Team Udayavani |

ಕೊಟ್ಟಿಗೆಹಾರ : ಬಿ.ಹೊಸಳ್ಳಿ, ಫಲ್ಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷದಿಂದ ಜಾನುವಾರುಗಳ ಮೇಲೆ ನಿರಂತರ ಹುಲಿ ದಾಳಿ ನಡೆಯುತ್ತಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

Advertisement

ಹೊಕ್ಕಳ್ಳಿಯ ಗ್ರಾಮಸ್ಥ ರಘು ಮಂಜುನಾಥ್ ಅವರ ಗದ್ದೆಯಲ್ಲಿ ಮಂಗಳವಾರ ಬೆಳಿಗ್ಗೆ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿ ದನವನ್ನು ಕೊಂದು ಹಾಕಿದೆ. ಕಳೆದ ತಿಂಗಳಿನಲ್ಲಿ ಬಿ.ಹೊಸಳ್ಳಿ, ಹೊಕ್ಕಳ್ಳಿ, ಭಾರತೀಬೈಲ್, ಹೆಗ್ಗುಡ್ಲು ಭಾಗದಲ್ಲೂ ನಿರಂತರ ದನಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ನಿತ್ಯವೂ ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಮೂರು ತಿಂಗಳಿನಿಂದ ಹುಲಿ ಹಿಡಿಯಲು ಸಾಧ್ಯವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಹುಲಿ ದನಗಳ ಮೇಲೆ ದಾಳಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯನ ಮೇಲೆಯೂ ಎಗರುವ ಸಾಧ್ಯತೆ ದಟ್ಟವಾಗಿದೆ ಎಂದು ಗ್ರಾಮಸ್ಥ ಸ್ಫರಿತ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯ ಸಿಬ್ಬಂದಿ ಅಭಿಜಿತ್, ಅರಣ್ಯ ರಕ್ಷಕ ಮೋಸಿನ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಯಡ್ರಾಮಿ : ರೈತ ಸಂಘಟನೆಯಿಂದ ಅಹೋರಾತ್ರಿ ಪ್ರತಿಭಟನೆ ; ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next