Advertisement

ಮತ್ತೆ ಹಸುವಿನ ಮೇಲೆ ದಾಳಿ ಮಾಡಿದ ಹುಲಿ: ಹುಣಸೂರಿನಲ್ಲಿ ಬೆಚ್ಚಿ ಬೀಳಿಸಿದ ಹುಲಿ ದಾಳಿ ಪ್ರಕರಣ

10:53 AM Nov 09, 2022 | Team Udayavani |

ಹುಣಸೂರು: ನಾಗರಹೊಳೆ ಉದ್ಯಾನವನದಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ ಮಂಗಳವಾರ ತಾಲೂಕಿನ ಬಿ.ಆರ್. ಅರಣ್ಯದಂಚಿನಲ್ಲಿ ನಡೆದಿದೆ.

Advertisement

ತಾಲೂಕಿನ ಹನಗೋಡು ಹೋಬಳಿಯ ಗೌಡಿಕೆರೆ ಗ್ರಾಮದ ಶೇಖರ್ ಎಂಬವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ದೂರಕ್ಕೆ ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲಿಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನಗಳಿಂದ ಈ ಭಾಗದಲ್ಲಿ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಉಪವಲಯಣ್ಯಧಿಕಾರಿ ಸಿದ್ದರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೆ ನೀಡಲಾಗುವುದು ಎಂದು ತಿಳಿಸಿದರು.

ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ; ನಾಲ್ಕು ಹಸುಗಳು ಬಲಿ
ಹೆಜ್ಜೆಪತ್ತೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಸುತ್ತಮುತ್ತಲಿನಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದ್ದು. ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಹೆಚ್ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Advertisement

ಇದನ್ನೂ ಓದಿ : ದೇಶದ 50ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌

Advertisement

Udayavani is now on Telegram. Click here to join our channel and stay updated with the latest news.

Next