Advertisement

ಅಪ್ಪು ಸಮಾಧಿಗೆ ಬಿಗಿ ಪೊಲೀಸ್‌ ಭದ್ರತೆ

11:34 PM Nov 01, 2021 | Team Udayavani |

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಸಮಾಧಿಗೆ ಭೇಟಿ ನೀಡಲು ಸೋಮವಾರವೂ ಕಂಠೀರವ ಸ್ಟುಡಿಯೋ ಬಳಿ ನೂರಾರು ಮಂದಿ ಅಭಿಮಾನಿಗಳು ಬಂದು ನಿರಾಸೆಗೊಂಡು ಹಿಂದಿರುಗಿದರು. ಈ ಮಧ್ಯೆ ತಮಿಳುನಟ ಶಿವಕಾರ್ತಿಕೇಯನ್‌ ಮತ್ತು  ಪುನೀತ್‌ ಸಹೋದರಿಯರು ಭೇಟಿ ನೀಡಿ  ಸಮಾಧಿಗೆ ಪೂಜೆ ಸಲ್ಲಿಸಿದರು.

Advertisement

ಮಂಗಳವಾರ ಕುಟುಂಬ ಸದಸ್ಯರಿಂದ ಹಾಲು-ತುಪ್ಪ ಕಾರ್ಯ ಇರುವುದರಿಂದ ಸಮಾಧಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ನಂದಿನಿ ಲೇಔಟ್‌ ಠಾಣೆ ಇನ್‌ಸ್ಪೆಕ್ಟರ್‌ ವೆಂಕಟೇಗೌಡ ನೇತೃತ್ವದಲ್ಲಿ ನಾಲ್ಕು ಕೆಎಸ್‌ಆರ್‌ಪಿ ತುಕಡಿಗಳು ಸೇರಿ 300 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮಂಗಳವಾರದ ಬಳಿಕ ಅಭಿಮಾನಿ ಗಳಿಗೆ ದರ್ಶನಕ್ಕೆ ಅವಕಾಶ ನೀಡುವ ಬಗ್ಗೆ ಚಿಂತಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮನೆಗೂ ಬಿಗಿ ಭದ್ರತೆ
ಪುನೀತ್‌ ನಿಧನ ಅನಂತರ ಸದಾಶಿವನಗರದ ಅವರ ಮನೆಗೂ ಭದ್ರತೆ ನೀಡಲಾಗಿದೆ.  ಕೆಲ ಅಭಿಮಾನಿಗಳು ಅವರ ಮನೆ ಬಳಿ ಹೋಗಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆಯಿದೆ ಹಿನ್ನೆಲೆಯಲ್ಲಿ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಅಕಾಲಿಕ  ಮಳೆ ಸಾಧ್ಯತೆ

Advertisement

ಶಿವಕಾರ್ತಿಕೇಯನ್‌ ಭೇಟಿ
ಕಂಠೀರವ ಸ್ಟುಡಿಯೋದ ಪುನೀತ್‌ ಸಮಾಧಿಗೆ ತಮಿಳುನಾಡಿನ ನಟ ಶಿವಕಾರ್ತಿಕೇಯನ್‌ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪುನೀತ್‌ ಅವರನ್ನು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದೆ. ಅವರ ಒಳ್ಳೆಯ ಗುಣಗಳು ತುಂಬ ಇಷ್ಟ ಆಯಿತು. ಅವರಿಂದ ಸಾಕಷ್ಟು ಕಲಿತಿದ್ದೇನೆ ಎಂದರು.

ಮನೆಗೆ ಪ್ರಭು ಗಣೇಶನ್‌ ಭೇಟಿ
ಸದಾಶಿವನಗರದ ಪುನೀತ್‌ ಮನೆಗೆ ತಮಿಳು ನಟ ಪ್ರಭು ಗಣೇಶನ್‌ ಭೇಟಿ ನೀಡಿ, ಪುನೀತ್‌ ಪತ್ನಿ ಅಶ್ವಿ‌ನಿ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ ಧೈರ್ಯ ತುಂಬಿದರು.

Advertisement

Udayavani is now on Telegram. Click here to join our channel and stay updated with the latest news.

Next