Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳ ಸಮಯ ಬದಲಾವಣೆ

07:49 PM May 12, 2021 | Team Udayavani |

ಚಿಕ್ಕಬಳ್ಳಾಪುರ : ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ ಮಾರ್ಗಸೂಚಿ ಹೊರಡಿಸಿರುವುದರಿಂದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರದ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಪ್ರಭಾರ ಜಂಟಿ ನಿರ್ದೇಶಕ ಡಾ. ಎಚ್ ಎಲ್ ಚಂದ್ರಕುಮಾರ್ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಂದಿನ ಆದೇಶ ವರೆಗೆ ಬೆಳಗ್ಗೆ 6 ಗಂಟೆಯಿಂದ ಹತ್ತು ಗಂಟೆ ವರೆಗೆ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಈ ಅವಧಿಯಲ್ಲಿ ರೈತರು ಬಿತ್ತನೆ, ಬೀಜ ಕೃಷಿ ಪರಿಕರ ಸೇರಿದಂತೆ ಇಲಾಖೆ ಸೌಲಭ್ಯಗಳನ್ನು ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಲಸಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ದ್ರೋಹವೆಸಗಿದೆ : ಸಿದ್ದು ಆಕ್ರೋಶ

ಹೆಚ್ಚಿನ ವಿವರಗಳಿಗಾಗಿ ಚಿಕ್ಕಬಳ್ಳಾಪುರ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕೆ ಎ.ಕೇಶವರೆಡ್ಡಿ 9731207959 , ಗೌರಿಬಿದನೂರು ಕೃಷಿ ಸಹಾಯಕ ನಿರ್ದೇಶಕ ಎಸ್.ಎಂ.ಮೋಹನ್ 8277930811, ಗುಡಿಬಂಡೆ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಅನೀಸ್ ಸಲ್ಮಾ 8277930849, ಬಾಗೇಪಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಕೆ ಸಿ ಮಂಜುನಾಥ್ 8277930828, ಚಿಂತಾಮಣಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್ 8277930832 ಹಾಗೂ ಶಿಡ್ಲಘಟ್ಟ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್ ವಿ ಮಂಜುನಾಥ್ 82779308857 ಮೊಬೈಲ್ ಸಂಖ್ಯೆಗೆ ಅವರನ್ನು ಸಂಪರ್ಕಿಸಲು ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next