Advertisement

ಭಾರತರತ್ನ ಪ್ರಶಸ್ತಿಗೆ ಜನರಲ್ ಕಾರಿಯಪ್ಪ ಸೂಕ್ತ ವ್ಯಕ್ತಿ; ರಾವತ್

01:28 PM Apr 14, 2020 | Sharanya Alva |

ಕೊಡಗು/ವಿರಾಜಪೇಟೆ: ಫೀಲ್ಡ್ ಮಾರ್ಷಲ್ ಜನರಲ್ ಕಾರ್ಯಪ್ಪ ಅವರು ಭಾರತ ರತ್ನಕ್ಕೆ ಅರ್ಹರು. ಆ ನೆಲೆಯಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ತಿಳಿಸಿದ್ದಾರೆ.

Advertisement

ಕೊಡಗು ಜಿಲ್ಲೆ ವಿರಾಜಪೇಟೆಯ ಗೋಣಿಕೊಪ್ಪಲಿನಲ್ಲಿ ಜನರಲ್ ಕೆಎಸ್ ತಿಮ್ಮಯ್ಯ ಪ್ರತಿಮೆ ಅನಾವರಣದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮದ ವರದಿ ಹೇಳಿದೆ.

ನಿವೃತ್ತ ಯೋಧರನ್ನು ಪ್ರತಿಯೊಬ್ಬರು ಗೌರವಿಸಬೇಕು. ಯೋಧರಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ ಎಂದು ರಾವತ್ ಈ ಸಂದರ್ಭದಲ್ಲಿ ಹೇಳಿದರು.

ಸ್ವತಂತ್ರ ಭಾರತದ ಮೊದಲ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಫೀಲ್ಡ್ ಮಾರ್ಷಲ್ ಜನರಲ್ ಕಾರ್ಯಪ್ಪ ಅವರಿಗೆ ಭಾರತ ರತ್ನ ಕೊಡಬೇಕೆಂಬ ಬೇಡಿಕೆ ಬಹುವರ್ಷಗಳಿಂದ ಕೇಳುತ್ತಾ ಬಂದಿತ್ತು. ಇದೀಗ ದೇಶದ ಪ್ರತಿಷ್ಠಿತ ಪ್ರಶಸ್ತಿಯನ್ನು ಜನರಲ್ ಕಾರ್ಯಪ್ಪ ಅವರಿಗೆ ದೊರೆಯುವಂತೆ ಮಾಡಲು ಶ್ರಮಿಸುವುದಾಗಿ ಬಿಪಿನ್ ರಾವತ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next