Advertisement

BJP ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಅಂತ ಹೇಳುವ ಕಾಲ ಬಂದಿದೆ :ರೇಣುಕಾಚಾರ್ಯ

07:48 PM Oct 14, 2023 | Team Udayavani |

ದಾವಣಗೆರೆ: ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ರಾಜ್ಯದಲ್ಲಿ ಬಿಜೆಪಿಗೆ ಸಮರ್ಥ ನಾಯಕ ಇಲ್ಲ ಎಂದು ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ ”ಪಕ್ಷ ಸಂಘಟನೆ ಮಾಡಿದ ಯಡಿಯೂರಪ್ಪ ಅವರ ಕೈಕಟ್ಟಿ ಹಾಕಿದ್ದಾರೆ. ಅವರಿಗೆ ಪ್ರವಾಸ ಮಾಡಲು ಅವಕಾಶ ನೀಡುತ್ತಿಲ್ಲ. ಬಿಜೆಪಿ ಕಟ್ಟಿ ಬೆಳೆಸಿದವರನ್ನು ಮೂಲೆಗುಂಪು ಮಾಡಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಅಂತ ನಾವು ಹೇಳುತ್ತಿದ್ದೆವು. ಆದರೆ ಇಂದು ಬಿಜೆಪಿ ಮುಳುಗುತ್ತಿರುವ ಹಡಗು ಅಂತ ನಮ್ಮವರೆ ಹೇಳುವ ಕಾಲ ಬಂದಿದೆ. ಬಿಜೆಪಿಯಲ್ಲಿ ಕಾರ್ಪೋರೇಟ್ ರೀತಿ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಗೆದ್ದಲು ಕಟ್ಟಿದ ಹುತ್ತದಲ್ಲಿ ಹಾವುಗಳು ಬಂದು ವಾಸವಾದಂತೆ ಆಗಿದೆ. ವಿಧಾನಪರಿಷತ್ ಸದಸ್ಯರು, ಬಿಜೆಪಿ ರಾಜ್ಯಾಧ್ಯಕ್ಷರು, ಯಾರ ತಂಡದಲ್ಲಿ ಗುರುತಿಸಿಕೊಂಡವರು ಅಂತ ಗೊತ್ತಾಗುತ್ತದೆ” ಎಂದು ಕಿಡಿ ಕಾರಿದರು.

”ಮೋದಿಯವರಿಗೆ ಸುಳ್ಳು ಮಾಹಿತಿ ನೀಡಿ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣರಾಗಿದ್ದಾರೆ. ಸಮರ್ಥ ನಾಯಕನ ಆಯ್ಕೆ ಮಾಡಿದರೆ ಪಕ್ಷದಲ್ಲಿ ಮತ್ತೆ ಹೊಸತನ ಬರುತ್ತದೆ. ಪಕ್ಷ ಸಂಘಟನೆ ಮಾಡಲು ಸಹಕಾರಿಯಾಗುತ್ತದೆ, ಹೊಸ ತಂಡ ರಚನೆ ಆಗುತ್ತದೆ. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಬದಲಾಗಿ ಅವರ ಕೈಯಲ್ಲಿ ಅಧಿಕಾರ ಕೊಟ್ಟು ನೋಡಿ.ರಾಜ್ಯದಲ್ಲಿ ಇದೆ ಪರಿಸ್ಥಿತಿ ಮುಂದುವರೆದರೆ ಲೊಕಸಭೆ ಚುನಾವಣೆ ಹೊತ್ತಿಗೆ ಪಕ್ಷ ಬಿಡುವವರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ” ಎಂದು ”ನಾನಂತು ಪಕ್ಷ ಬಿಡುತ್ತೇನೆ ಅಂತ ಎಲ್ಲಿಯೂ ಹೇಳಿಲ್ಲ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next