Advertisement

Timing ತಗಾದೆ; ದೂರು ಪ್ರತಿದೂರು: ಹೆದ್ದಾರಿಗೆ ಬಸ್ ಅಡ್ಡ ಇಟ್ಟ ಚಾಲಕ!

11:21 AM Apr 05, 2024 | Team Udayavani |

ಪಡುಬಿದ್ರಿ: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಅಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.

Advertisement

ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕೋಪಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.

ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next