Advertisement

Kinnigoli ಹೊಂಡಕ್ಕೆ ಬಿದ್ದ ಟಿಪ್ಪರ್‌: ಚಾಲಕ ಸಾವು

11:46 PM Nov 10, 2023 | Team Udayavani |

ಕಿನ್ನಿಗೋಳಿ: ಕಿನ್ನಿಗೋಳಿ ಕಟೀಲು ಸಮೀಪದ ನಿಡ್ಡೋಡಿ ಶುಂಠಿಲಪದವಿನಿಂದ ಕಟೀಲು ಕಡೆಗೆ ಬರುತ್ತಿದ್ದ ಟಿಪ್ಪರ್‌ ರೆಸಾರ್ಟ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ, ಭಾರಿ ಗಾತ್ರದ ಹೊಂಡಕ್ಕೆ ಬಿದ್ದು ಚಾಲಕ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ಮೂಡುಬಿದಿರೆ ಪಾಲಡ್ಕ ನಿವಾಸಿ ವಿಶ್ವನಾಥ ನಾಯಕ್‌ (45) ಮೃತ ಚಾಲಕ.

ಶುಂಠಿಲ ಪದವು ಬಳಿಯಿಂದ ಟಿಪ್ಪರ್‌ನಲ್ಲಿ ಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯಾ ರೆಸಾರ್ಟ್‌ ಚಡಾವು ಬಳಿ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಚಲಿಸಿ, ಭಾರಿ ಗಾತ್ರದ ಹೊಂಡಕ್ಕೆ ಬಿದ್ದಿದೆ. ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್‌ನ ಒಳಗಡೆ ಸಿಲುಕಿಕೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next