Advertisement

Kota ಕಾರಿಗೆ ಟಿಪ್ಪರ್‌ ಢಿಕ್ಕಿ; ಚಾಲಕ ಗಂಭೀರ

12:04 AM Feb 07, 2024 | Team Udayavani |

ಕೋಟ: ಕಾರಿಗೆ ಟಿಪ್ಪರ್‌ ಢಿಕ್ಕಿಯಾಗಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬನ್ನಾಡಿ ಸಮೀಪ ಉಪ್ಲಾಡಿಯಲ್ಲಿ ಫೆ. 6ರಂದು ಸಂಭವಿಸಿದೆ.

Advertisement

ಕಾರು ಚಾಲಕ ಗಣೇಶ್‌ ಶೆಟ್ಟಿ (39) ಗಂಭೀರ ಗಾಯಗೊಂಡವರು. ಅವರು ಕೋಟ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ.

ಕೋಟ ಮೂರ್ಕೈಯಿಂದ ಮಧುವನ ಕಡೆ ಸಂಚರಿಸುತ್ತಿದ್ದ ಕಾರಿಗೆ ಬನ್ನಾಡಿಯಿಂದ ಕೋಟ ಕಡೆ ಸಂಚರಿಸುತ್ತಿದ್ದ ಟಿಪ್ಪರ್‌ವಿರುದ್ಧ ದಿಕ್ಕಿನಲ್ಲಿ ಬಂದು ಢಿಕ್ಕಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಗಂಭೀರ ಗಾಯವಾಗಿದೆ. ತತ್‌‍ಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.

ಕೋಟ ಪೊಲೀಸ್‌ ಠಾಣೆಯ ಉಪನಿರೀಕ್ಷಕ ತೇಜಸ್ವಿ, ಕ್ರೈಂ ವಿಭಾಗದ ಪಿಎಸ್‌ಐ ಸುಧಾ ಪ್ರಭು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next