Advertisement

ವಿಧಾನಪರಿಷತ್‌ಗೆ ತಿಪ್ಪೇಸ್ವಾಮಿ ನಾಮ ನಿರ್ದೇಶನ

01:15 AM Jan 26, 2019 | Team Udayavani |

ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿಶೇಷಾಧಿಕಾರಿ ತಿಪ್ಪೇಸ್ವಾಮಿ ಅವರನ್ನು ವಿಧಾನಪರಿಷತ್‌ಗೆ ನಾಮ ನಿರ್ದೇಶನ ಮಾಡುವ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ರಾಜ್ಯಪಾಲರನ್ನು ಭೇಟಿ ಮಾಡಿ, ವಿಧಾನಪರಿಷತ್‌ನ ನಾಮಕರಣ ಸ್ಥಾನಕ್ಕೆ ತಿಪ್ಪೇಸ್ವಾಮಿ ಅವರ ಹೆಸರನ್ನು ಶಿಫಾರಸು ಮಾಡಿರುವ ಕುರಿತು ಮಾಹಿತಿ ನೀಡಿದರು.

Advertisement

ರಾಜ್ಯಪಾಲರು ಅದಕ್ಕೆ ಒಪ್ಪಿಗೆಸೂಚಿಸಿ ದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ತಿಪ್ಪೇಸ್ವಾಮಿಯವರನ್ನು ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡುವ ಶಿಫಾರಸಿಗೆ ರಾಜ್ಯಪಾಲರ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.

ಪ್ರಸ್ತುತ ಸಚಿವ ರೇವಣ್ಣ ಅವರ ವಿಶೇಷ ಅಧಿಕಾರಿಯಾಗಿರುವ ತಿಪ್ಪೇಸ್ವಾಮಿ ಅವರು ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿದ್ದಾಗಲೂ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ದೇವೇಗೌಡರ ಕುಟುಂಬಕ್ಕೆ ಆಪ್ತರೂ ಆಗಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next