Advertisement

ವಿಧಾನಸೌಧದಲ್ಲೇ ಟಿಪ್ಪು ಜಯಂತಿ ಆಚರಣೆ

12:16 PM Nov 03, 2018 | Team Udayavani |

ಬೆಂಗಳೂರು: ಹಿಂದಿನ ಕಾಂಗ್ರೆಸ್‌ ಸರ್ಕಾರ ಟಿಪ್ಪು ಜಯಂತಿ ಆಚರಣೆ ಆರಂಭಿಸಿದ್ದು, ಈ ವರ್ಷವೂ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲೇ ಟಿಪ್ಪು ಜಯಂತಿ ಆಚರಿಸಲಾಗುವುದು ಎಂದು ವಕ್ಫ್ ಸಚಿವ ಜಮೀರ್‌ ಅಹಮದ್‌ ಖಾನ್‌  ಪುನರುತ್ಛರಿಸಿದ್ದಾರೆ.

Advertisement

ಸುದ್ದಿಗಾರರ ಜತೆ  ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್‌ ಸರ್ಕಾರ ಮೂರು ವರ್ಷಗಳಿಂದ ಟಿಪು ಜಯಂತಿ ಆಚರಣೆ ಮಾಡುತ್ತಾ ಬಂದಿದೆ. ಸಮ್ಮಿಶ್ರ ಸರ್ಕಾರವೂ ನ.10ರಂದು ಟಿಪ್ಪು ಜಯಂತಿ ಆಚರಿಸಲು ನಿರ್ಧರಿಸಿದೆ ಎಂದು ಹೇಳಿದರು.

ಇದೇ ವೇಳೆ, ಹಾವೇರಿಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಮೇಶ್‌ ಕುಮಾರ್‌ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ನಕಲಿ ವೈದ್ಯರನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗಿತ್ತು.

ಹಾವೇರಿ ಜಿಲ್ಲೆಯಲ್ಲಿ ನಕಲಿ ವೈದ್ಯರು ಇರುವ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈಗಾಗಲೇ ನಕಲಿ ವೈದ್ಯರ ಹಾವಳಿ ಕುರಿತು ತನಿಖೆ ನಡೆಯುತ್ತಿದೆ. ಹಾವೇರಿ ಜಿಲ್ಲೆಯ ನಕಲಿ ವೈದ್ಯರ ಪ್ರಕರಣದ ಮಾಹಿತಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next