Advertisement

ಟಿಪ್ಪು ಜಯಂತಿ : ನನ್ನ ಹೆಸರು ಹಾಕಬೇಡಿ ; ಸಿಎಸ್‌ಗೆ ಸಚಿವ ಹೆಗಡೆ ಪತ್ರ

12:22 PM Nov 04, 2018 | |

ಬೆಂಗಳೂರು: ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬೇಡಿ ಎಂದು ಈ ವರ್ಷವೂ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Advertisement

ಶಿಷ್ಟಾಚಾರದ ಪ್ರಕಾರ ನನ್ನ ಹೆಸರನ್ನು ಹಾಕಬೇಡಿ ಎಂದು ಅನಂತ್‌ ಕುಮಾರ್‌ ಹೆಗಡೆ ಅವರು ಪತ್ರ ಬರೆದಿದ್ದು, ಬೆಳಗಾವಿ ಮತ್ತು ಉತ್ತರಕನ್ನಡದ ಜಿಲ್ಲಾಧಿಕಾರಿಗೂ ಪತ್ರ ಬರೆದಿದ್ದಾರೆ.

ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದ ಅನಂತ್‌ ಕುಮಾರ್‌ ಹೆಗಡೆ ಅವರು ಕಳೆದ ವರ್ಷವೂ ಹೆಸರು ಹಾಕಬಾರದಾಗಿ ಪತ್ರ ಬರೆದಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next