Advertisement

ಟಿಪ್ಪು ಜಯಂತಿ ಆಚರಿಸಿಯೇ ಸಿದ್ಧ

08:11 AM Oct 23, 2017 | Team Udayavani |

ಮಂಗಳೂರು: ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಆದರೆ ಯಾರೇ ವಿರೋಧ ಮಾಡಿದರೂ ಟಿಪ್ಪು ಜಯಂತಿಯನ್ನು ರಾಜ್ಯ ಸರಕಾರ ಆಚರಿಸಿಯೇ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಅವರು ಈ ಹಿಂದೆ ಕೆಜೆಪಿ ಮಾಡಿದಾಗ ಟಿಪ್ಪು ಜಯಂತಿ ಆಚರಿಸಿದ್ದರು. ಈಗ ಬಿಜೆಪಿಗೆ ಸೇರಿದ ಬಳಿಕ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದರು. ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಅವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಬಾರದು ಎಂಬ ಮನವಿಯ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು, ಶಿಷ್ಟಾಚಾರದ ಪ್ರಕಾರ ಅವರನ್ನು ಕರೆಯುತ್ತೇವೆ. ಟಿಪ್ಪು ಇತಿಹಾಸ ಗೊತ್ತಿಲ್ಲದೆ ಕೆಲವರು ಮಾತನಾಡುತ್ತಾರೆ. ಮೈಸೂರು ಯುದ್ಧದ ಬಗ್ಗೆ, ಟಿಪ್ಪು ಹೇಗೆ ಸಾವನ್ನಪ್ಪಿದ ಎಂಬ ಬಗ್ಗೆ, ಅವನ ಮಕ್ಕಳನ್ನು ಯಾಕೆ ಅಡ ಇರಿಸಲಾಗಿತ್ತು ಎಂಬ ಹಲವು ವಿಷಯಗಳು ವಿರೋಧಿಸುವವರಿಗೆ ಗೊತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next