Advertisement
ಮಧ್ಯಾಹ್ನ 1.40ಕ್ಕೆ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಬುಧವಾರ ಸುನೀಲ್ ಸುಬ್ರಮಣ್ಯ ಅವರು ಈ ವಿಷಯ ಪ್ರಸ್ತಾಪ ಮಾಡಿದ್ದರು. ಅದರಂತೆ ಇದು ಕಾರ್ಯಸೂಚಿಯಲ್ಲಿ ದಾಖಲಾಗಬೇಕಿತ್ತು. ಆದರೆ,ಇದನ್ನು ಕಾರ್ಯಸೂಚಿ ಪಟ್ಟಿಯಿಂದ ಕೈಬಿಡಲಾಗಿದೆ. ಸರ್ಕಾರ ಈ ವಿಷಯದಲ್ಲಿ ಉತ್ತರ ನೀಡದೆ ಪಲಾಯನ ಮಾಡುತ್ತಿದೆ. ಟಿಪ್ಪು ಜಯಂತಿ ಆಚರಣೆಯಿಂದ ಕೊಡವರಿಗೆ ಬಹಳ ಆಘಾತವಾಗಿದೆ. ಇದರ ಬಗ್ಗೆ ಉತ್ತರ ನೀಡಬೇಕಾದ ಸರ್ಕಾರ ಅದರಿಂದ
ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಅಲ್ಲದೆ, ಸರಕಾರದ ಕ್ರಮ ಪ್ರಶ್ನಿಸಿ ಪ್ರತಿಪಕ್ಷ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.
ಉತ್ತರ ನೀಡುತ್ತೇವೆ. ಆದರೆ, ಇದೇ ವಿಷಯವನ್ನು ಮುಂದಿಟ್ಟುಕೊಂಡು ಸದನದ ಸಮಯ ಹಾಳು ಮಾಡಬಾರದು. ಜನರ ಹೊಟ್ಟೆಪಾಡಿನ ವಿಚಾರ ನೋಡಿ. ಟಿಪ್ಪು ವಿಷಯ ನಿಮಗೆ ಹೊಟ್ಟೆ ತುಂಬಿಸುತ್ತದೆಯೇ ಎಂದು ಛೇಡಿಸಿದರು. ವಿರೋಧ
ಪಕ್ಷದ ಸದಸ್ಯರು ಮತ್ತೆ ಪ್ರತಿಭಟನೆ ನಡೆಸಲು ಆರಂಭಿಸಿದಾಗ ಸಭಾಪತಿಗಳು ಸದನವನ್ನು ಮಧ್ಯಾಹ್ನ 3ಕ್ಕೆ ಮುಂದೂಡಿದರು. ಮಧ್ಯಾಹ್ನ ಭೋಜನ ವಿರಾಮದ ನಂತರ ಕಲಾಪ 3.35ಕ್ಕೆ ಆರಂಭವಾದಾಗ ಯಾವ ಸಚಿವರೂ ಸದನಕ್ಕೆ ಬಂದಿರಲಿಲ್ಲ. ಇದರಿಂದ ಸಭಾಪತಿಗಳು 10 ನಿಮಿಷಗಳ ಕಾಲ ಸದನವನ್ನು ಮುಂದೂಡಿದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ
ಕೋಟಾ ಶ್ರೀನಿವಾಸ ಪೂಜಾರಿ, ಸರ್ಕಾರ ಉತ್ತರ ಕೊಡದೆ ಪಲಾಯನ ಮಾಡಿದೆ. ಸಭಾಪತಿಗಳು ಸಚಿವರು ಇಲ್ಲದ ಕಾರಣ ಸದನ ಮುಂದೂಡಿದ್ದಾರೆ. ಇದು ಸಚಿವರಿಲ್ಲದ ಸದನ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ಗಲಾಟೆ ಜೋರಾದಾಗ ಸಭಾಪತಿಗಳು ಪುನ: ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು. ಕ್ರಮದ ಪರಿಶೀಲನೆ: ಸಭಾಪತಿ ಪ್ರತಾಪ್ಚಂದ್ರಶೆಟ್ಟಿ ಮಾತನಾಡಿ, ಸದನದಲ್ಲಿ ಶೇಮ್, ಶೇಮ್ ಎಂದು ಹೇಳಿದ್ದು ತಪ್ಪು. ಯಾರು ಈ ರೀತಿ ಹೇಳಿದ್ದಾರೆಎಂಬುದನ್ನು ಪರಿಶೀಲಿಸಿ ಅವರ ವಿರುದಟಛಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ನಂತರ ಮಾತನಾಡಿದ ಸಭಾನಾಯಕಿ ಜಯಮಾಲಾ, ನಾವು ಪ್ರತಿಪಕ್ಷ ಸದಸ್ಯರಿಗೆ ಶೇಮ್, ಶೇಮ್ ಎಂದು ಹೇಳಿಲ್ಲ. ಒಂದು ವೇಳೆ ಹೇಳಿದ್ದರೆ ಅದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಹೇಳಿ ಗೊಂದಲಕ್ಕೆ ತೆರೆ ಎಳೆದರು. ಮಾಣಿಪ್ಪಾಡಿ ವರದಿ ಜಾರಿಗೆ ಬಿಜೆಪಿ ಆಗ್ರಹ
ವಿಧಾನಪರಿಷತ್ತು: ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಲು ಅನುಮತಿ ನೀಡುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಷಯ ಪ್ರಸ್ತಾಪಿಸಿ, ರಾಜ್ಯದಲ್ಲಿ 2 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ 56 ಸಾವಿರ ಎಕರೆಗೂ ಅಧಿಕ ವಕ್ಫ್ ಆಸ್ತಿ ಕಬಳಿಕೆಯಾಗಿ ದೆ. ಇದೊಂದು ದೊಡ್ಡ ಹಗರಣವಾಗಿದ್ದು, ಕೂಡಲೇ ಸರ್ಕಾರ ಮಾಣಿಪ್ಪಾಡಿ ವರದಿ ಅನುಷ್ಠಾನಗೊಳಿಸಬೇಕು.
ಈ ಕುರಿತು ಸದನದಲ್ಲಿ ಚರ್ಚಿಸಲು ಅನುಮತಿ ನೀಡಬೇಕೆಂದು ಆಗ್ರಹಿಸಿದರು. ಆದರೆ ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ನಂತರ ಸಭಾಪತಿಗಳು ಮೊದಲು ಪ್ರಶ್ನೋತ್ತರ, ಶೂನ್ಯವೇಳೆ ಕಲಾಪ ಮುಗಿಸಿ ನಂತರ ನೋಡೋಣ ಎಂದು ಸದಸ್ಯರನ್ನು ಸಮಾಧಾನಗೊಳಿಸಿದರು.