Advertisement

10ಕ್ಕೆ ಟಿಪ್ಪು ಜಯಂತಿ ಆಚರಣೆ

06:15 AM Nov 04, 2018 | |

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಮಾಡಬಾರದೆಂಬ ಒತ್ತಾಯದ ನಡುವೆಯೇ ನ.10ರಂದು ವಿಧಾನಸೌಧದಲ್ಲೇ ಟಿಪ್ಪು ಜಯಂತಿ ಆಚರಿಸಲು ಸಮ್ಮಿಶ್ರ ಸರ್ಕಾರ ತೀರ್ಮಾನಿಸಿದೆ. 

Advertisement

ಟಿಪ್ಪು ಜಯಂತಿ ಆಚರಣೆ ಕುರಿತು ವಕ್ಫ್ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌ ಅವರ ಜತೆ ಚರ್ಚಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ, ನ.10ರಂದು ಪ್ರತಿ ವರ್ಷದಂತೆ ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲಾಗುವುದು ಎಂದರು. 

ಟಿಪ್ಪು ಜಯಂತಿ ವಿರೋಧಿಸುವವರು ಹಿಂದೆ ಅಧಿಕಾರದಲ್ಲಿದ್ದಾಗ ಟಿಪ್ಪು ವೇಷ ಹಾಕಿಕೊಂಡು ಏನು ಮಾಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ವಿರೋಧಗಳಿಗೆ ತಲೆ ಕೆಡಿಸಿಕೊಳ್ಳದೆ ಸರ್ಕಾರ ಜಯಂತಿ ಆಚರಿಸಲಿದೆ ಎಂದು ತಿಳಿಸಿದರು. 

ಸಚಿವ ಜಮೀರ್‌ ಅಹಮದ್‌, ಈ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ವಿಧಾನಸೌಧ ಬಾಂಕ್ವೆಟ್‌ ಸಭಾಂಗಣದಲ್ಲಿಯೇ ಟಿಪ್ಪು ಜಯಂತಿ ನಡೆಯಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next