Advertisement

ಹಜ್‌ ಭವನಕ್ಕೆ ಟಿಪ್ಪು ಹೆಸರು ಚರ್ಚಿಸಿ ತೀರ್ಮಾನ: ಜಮೀರ್‌

06:05 AM Jun 23, 2018 | Team Udayavani |

ಬೆಂಗಳೂರು: ಹಜ್‌ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರು ಇಡಬೇಕೆಂಬ ಪ್ರಸ್ತಾಪ ಬಂದಿದ್ದು, ಈ ಬಗ್ಗೆ ಎಲ್ಲರೊಂದಿಗೂ
ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹಜ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಹಜ್‌ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರಿಡುವ ಪ್ರಸ್ತಾಪ ಕಳೆದ ವರ್ಷ ಹಜ್‌ ಯಾತ್ರೆಯ ಸಂದರ್ಭದಲ್ಲಿಯೇ ಬಂದಿತ್ತು. ಅದೊಂದು ಸ್ವತಂತ್ರ ಸಂಸ್ಥೆಯಾಗಿದ್ದು, ಹಜ್‌ ಸಮಿತಿಯವರು ಟಿಪ್ಪು ಸುಲ್ತಾನ್‌ ಹಜ್‌ ಘರ್‌ ಎಂದು ಹೆಸರಿಡುವಂತೆ ಮನವಿ ಮಾಡಿದ್ದರು.

ಇದೇ ವಿಚಾರ ಹಜ್‌ ಕಮಿಟಿ ಪರಿಶೀಲನಾ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ನಾನು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಟಿಪ್ಪು ಜಯಂತಿ ಆಚರಣೆಗೂ ಹಜ್‌ ಭವನಕ್ಕೆ ಟಿಪ್ಪು ಹೆಸರಿಡುವುದಕ್ಕೂ ಸಂಬಂಧ ಇಲ್ಲ. ಈ ಬಗ್ಗೆ ಪಕ್ಷದ
ಹಿರಿಯ ನಾಯಕರು ಹಾಗೂ ಪ್ರತಿಪಕ್ಷದ ನಾಯಕ ಯಡಿಯೂರಪ್ಪ ಅವರೊಂ ದಿಗೂ ಚರ್ಚಿಸಿ ತೀರ್ಮಾನ
ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಬಿಜೆಪಿ ವಿರೋಧಿಸುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ, ತನ್ವೀರ್‌ ಸೇಠ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, “ನಾನು ನಾಯಕ ಆಗಲು
ರಾಜಕೀಯಕ್ಕೆ ಬಂದಿಲ್ಲ. ಯಾರನ್ನೂ ಓವರ್‌ ಟೇಕ್‌ ಮಾಡಲ್ಲ. ಸಮಾಜ ಸೇವಕನಾಗಲು ಬಂದಿದ್ದೇನೆ’
ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next