Advertisement

ಇಂದು ದಿಲ್ಲಿಯಲ್ಲಿಸಂಸದರ ತಿರಂಗಾ ಬೈಕ್‌ ರ‍್ಯಾಲಿ: ಸಚಿವ ಪ್ರಹ್ಲಾದ್‌ ಜೋಶಿ

12:11 AM Aug 03, 2022 | Team Udayavani |

ಹೊಸದಿಲ್ಲಿ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹೊಸದಿಲ್ಲಿಯಲ್ಲಿ ಕೆಂಪು ಕೋಟೆಯಿಂದ ಸಂಸತ್‌ ಭವನದ ವರೆಗೆ ತಿರಂಗಾ ಬೈಕ್‌ ರ‍್ಯಾಲಿ ನಡೆಯಲಿದೆ.

Advertisement

ಕೇಂದ್ರ ಸಂಸ್ಕೃತಿ ಸಚಿವಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಎಲ್ಲ ಪಕ್ಷಗಳ ಸಂಸದರು, ಕೇಂದ್ರ ಸಚಿವರು ಇದರಲ್ಲಿ ಭಾಗವಹಿಸಬೇಕು ಎಂದು ಸಚಿವ ಪ್ರಹ್ಲಾದ್‌ ಜೋಶಿ ಮನವಿ ಮಾಡಿದ್ದಾರೆ. ಇದು ಬಿಜೆಪಿಯ ಕಾರ್ಯಕ್ರಮ ಅಲ್ಲ ಎಂದಿದ್ದಾರೆ.

ಇದೇ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಆ. 9ರಿಂದ ಆ. 15ರ ವರೆಗೆ ದೇಶಾದ್ಯಂತ ಪ್ರಭಾತ ಪೇರಿ ಆಯೋಜಿಸುವಂತೆ ಸಂಸದರಿಗೆ ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next