Advertisement

ತೀರ್ಥಹಳ್ಳಿ: BJP ಬಿಟ್ಟು Congress ಸೇರಿದ 50 ಕ್ಕೂ ಹೆಚ್ಚು ಕಾರ್ಯಕರ್ತರು

06:32 PM Apr 06, 2023 | Vishnudas Patil |

ತೀರ್ಥಹಳ್ಳಿ : ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Advertisement

ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಸಮೀಪದ ಕಚೇರಿಯಲ್ಲಿ, ಆಮ್ರಪಾಲಿ ಸುರೇಶ್ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮರನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ 50 ಕ್ಕೂ ಹೆಚ್ಚು ಮಂದಿ ಯುವಕರು ಈ ಬಾರಿ ಕಿಮ್ಮನೆ ರತ್ನಾಕರ್ ಅವರನ್ನು ಗೆಲ್ಲಿಸುವ ಪ್ರತಿಜ್ಞೆಮಾಡಿದರು.

ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್ , ಆಮ್ರಪಾಲಿ ಸುರೇಶ್, ಅಮರಾನಾಥ್ ಶೆಟ್ಟಿ, ಪೂರ್ಣೇಶ್ ಕೆಳಕೆರೆ, ಗಣಪತಿ, ವೈ ನಾಗೇಂದ್ರ, ಸುಜಿತ್ ಸೇರಿ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next