Advertisement

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

01:41 AM May 19, 2024 | Team Udayavani |

ಚೆನ್ನೈ: ಕೇರಳದ ತಿರುವನಂತಪುರದಿಂದ ಬೆಂಗಳೂರಿಗೆ ಹೊರಟಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ತಮಿಳುನಾಡಿನ ತಿರುಚಿನಪಳ್ಳಿಯಲ್ಲಿ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ.

Advertisement

137 ಪ್ರಯಾಣಿಕರೊಂದಿಗೆ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆಯೇ ತಾಂತ್ರಿಕ ದೋಷ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ತಿರುಚಿನಪಳ್ಳಿ ವಿಮಾನ ನಿಲ್ದಾಣದ ಅನುಮತಿ ಪಡೆದು ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಸುರಕ್ಷಿತವಾಗಿ ಭೂ ಸ್ಪರ್ಶ ಮಾಡಿದ್ದು, ತಾಂತ್ರಿಕ ದೋಷಗಳ ಬಗ್ಗೆ ಸಿಬಂದಿ ಪರಿಶೀಲನೆ ನಡೆಸುತ್ತಿದ್ದಾರೆಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next