Advertisement

ಇನ್ನು ಮುಂದೆ ಹಿರಿಯ ನಾಗರಿಕರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಸುಲಭ

07:36 PM Nov 23, 2022 | Team Udayavani |

ತಿರುಪತಿ: ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ.

Advertisement

ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್‌ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್‌ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್‌)ವನ್ನು ಕೌಂಟರ್‌ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.

ದರ್ಶನ ಉಚಿತವಾಗಿದೆ. ಜತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ.

ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ಜತೆಗೆ ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಕಾರ್‌ ಪಾರ್ಕಿಂಗ್‌ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್‌ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್‌ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next