Advertisement

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

06:07 PM Sep 22, 2024 | Team Udayavani |

ಹೊಸದಿಲ್ಲಿ: ತಿರುಪತಿ ಲಡ್ಡು ಪ್ರಸಾದ ಅಪವಿತ್ರವಾಗಿರುವ ವಿಚಾರದಲ್ಲಿ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ, ಆಂಧ್ರ ಮಾಜಿ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ಮೋದಿ ಅವರಿಗೆ ಭಾನುವಾರ(ಸೆ22) ರಂದು ಪತ್ರ ಬರೆದಿದ್ದಾರೆ.

Advertisement

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು “ಸಾಮಾನ್ಯ ಸುಳ್ಳುಗಾರ” ತಿರುಪತಿ ಲಡ್ಡು ಕಲಬೆರಕೆ ವಿಚಾರದಲ್ಲಿ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಕೋರಿದ್ದಾರೆ.

ಸಿಎಂ ಚಂದ್ರಬಾಬು ನಾಯ್ಡು ಅವರು ಕೇವಲ ರಾಜಕೀಯ ಉದ್ದೇಶಕ್ಕಾಗಿ ಕೋಟ್ಯಂತರ ಜನರ ನಂಬಿಕೆಗೆ ಧಕ್ಕೆ ತರುವಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಜಗನ್ ಆರೋಪಿಸಿದ್ದಾರೆ.

“ಸರ್, ಈ ನಿರ್ಣಾಯಕ ಘಟ್ಟದಲ್ಲಿ ಇಡೀ ದೇಶವೇ ನಿಮ್ಮತ್ತ ನೋಡುತ್ತಿದೆ. ನಾಯ್ಡು ಅವರ ನಾಚಿಕೆಗೇಡಿನ ಸುಳ್ಳುಗಳನ್ನು ಹರಡುವ ಮತ್ತು ಸತ್ಯವನ್ನು ಬೆಳಕಿಗೆ ತರಲು ತೀವ್ರವಾಗಿ ವಾಗ್ದಂಡನೆಗೆ ಗುರಿಪಡಿಸಬೇಕಿರುವುದು ಬಹಳ ಅವಶ್ಯಕವಾಗಿದೆ. ಸರ್, ಇದು ಕೋಟಿಗಟ್ಟಲೆ ಹಿಂದೂ ಭಕ್ತರ ಮನಸ್ಸಿನಲ್ಲಿ ನಾಯ್ಡು ಸೃಷ್ಟಿಸಿರುವ ಅನುಮಾನಗಳನ್ನು ನಿವಾರಿಸಲು ಮತ್ತು ಟಿಟಿಡಿಯ ಪಾವಿತ್ರ್ಯತೆಯಲ್ಲಿ ಭಕ್ತರ ನಂಬಿಕೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ” ಎಂದು ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next