Advertisement

ಬಂಗಾಳದಲ್ಲಿ ರಾಜಕೀಯ ಘರ್ಷಣೆ; 3 ಬಿಜೆಪಿ ಕಾರ್ಯಕರ್ತರಿಗೆ ಗುಂಡೇಟು

09:18 AM May 22, 2019 | Team Udayavani |

ಕೋಲ್ಕತಾ : ಮತದಾನ ಮುಗಿದು ಫ‌ಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವೇಳೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಘರ್ಷಣೆಗಳು ಮುಂದುವರಿದಿವೆ. ಸೋಮವಾರ ತಡ ರಾತ್ರಿ ಕೂಚ್‌ ಬೆಹರ್‌ನ ಸಿತಾಯಿ ಪ್ರದೇಶದಲ್ಲಿ ನಡೆದ ಮಾರಾಮಾರಿಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗುಂಡೇಟು ತಗುಲಿ ಗಾಯಗೊಂಡಿದ್ದಾರೆ.

Advertisement

ಬಿಜೆಪಿ ಕಾರ್ಯಕರ್ತನಿಗೆ ಸೇರಿದೆ ಎನ್ನಲಾದ ಅಂಗಡಿಯೊಂದನ್ನು ಧ್ವಂಸಗೈಯಲಾಗಿದೆ. ಈ ವೇಳೆ ಘರ್ಷಣೆ ನಡೆದಿದೆ.

ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಟಿಎಂಸಿ ನಮ್ಮ ಕಾರ್ಯಕರ್ತರು ದಾಳಿ ನಡೆಸಿಲ್ಲ ಎಂದು ಹೇಳಿದೆ.

ರಾಜ್ಯದೆಲ್ಲೆಡೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next