Advertisement

ಏನಿದು ಮೆಟ್ರೋ ನಿಲ್ದಾಣದ ಉದ್ಘಾಟನೆ ವಿವಾದ ?: ಮಮತಾಗೆ ಆಹ್ವಾನವಿಲ್ಲವೆ?

06:46 PM Jul 10, 2022 | Team Udayavani |

ಕೋಲ್ಕತಾ : ಪೂರ್ವ-ಪಶ್ಚಿಮ ಕಾರಿಡಾರ್‌ನ ಸೀಲ್ದಾ ಮೆಟ್ರೋ ನಿಲ್ದಾಣದ ಉದ್ಘಾಟನೆಗೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರೈಲ್ವೆ ಸಚಿವಾಲಯದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂದು ಟಿಎಂಸಿ ಹೇಳುವುದರೊಂದಿಗೆ ವಿವಾದ ಭುಗಿಲೆದ್ದಿದೆ. ಆದರೆ, ಕೆಲವೇ ಗಂಟೆಗಳ ನಂತರ, ಮುಖ್ಯಮಂತ್ರಿಯನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ರೈಲ್ವೆ ಮೂಲಗಳು ಸುದ್ದಿ ಸಂಸ್ಥೆಗಳಿಗೆ ಸ್ಪಷ್ಟನೆ ನೀಡಿವೆ.

Advertisement

ಪೂರ್ವ ಪಶ್ಚಿಮ ಮೆಟ್ರೋ ಕಾರಿಡಾರ್‌ನ ಪ್ರಮುಖ ನಿಲ್ದಾಣವಾದ ಸೀಲ್ದಾ  ಸೋಮವಾರ (ಜುಲೈ 11) ಉದ್ಘಾಟನೆಗೊಳ್ಳಲಿದೆ. ಜುಲೈ 14 ರಿಂದ ಸಾಲ್ಟ್ ಲೇಕ್ ಮತ್ತು ಸೀಲ್ದಾದಲ್ಲಿನ ಸೆಕ್ಟರ್ ೫ ನಡುವೆ ವಾಣಿಜ್ಯ ಸೇವೆಗಳು ಪ್ರಾರಂಭವಾಗಲಿವೆ ಎಂದು ಮೆಟ್ರೋ ರೈಲ್ವೆ ವಕ್ತಾರ ಏಕಲಬ್ಯ ಚಕ್ರವರ್ತಿ ತಿಳಿಸಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ನಿಲ್ದಾಣದ ಉದ್ಘಾಟನೆಯನ್ನು ಮಾಡಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸದೆ ಕೇಂದ್ರವು ರಾಜಕೀಯ ಮಾಡುತ್ತಿದೆ ಎಂದು ಟಿಎಂಸಿ ಆರೋಪಿಸಿದೆ.

ಟಿಎಂಸಿ ಶಾಸಕ ಮದನ್ ಮಿತ್ರಾ ಅವರು ಬ್ಯಾನರ್ಜಿ ಅವರು ರಾಜ್ಯದಲ್ಲಿ ಇಲ್ಲದಿರುವುದರಿಂದ, ಕೆಎಂಆರ್‌ಸಿ ಪ್ರಮುಖ ಮೆಟ್ರೋ ನಿಲ್ದಾಣವನ್ನು ಉದ್ಘಾಟಿಸಲಾಗುತ್ತಿದೆ,ಇದು ಪ್ರಜಾಪ್ರಭುತ್ವದ ಸಂಪ್ರದಾಯವಲ್ಲ ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next