Advertisement

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಬರ್ಬರ ಹತ್ಯೆ: ವಾರದಲ್ಲಿ ನಡೆದ ಎರಡನೇ ಪ್ರಕರಣ

09:47 AM Oct 16, 2019 | Team Udayavani |

ನವದೆಹಲಿ: ಪಶ್ಚಿಮ ಬಂಗಾಳದ ಮಿಡ್ನಾಪೂರ್ ಜಿಲ್ಲೆಯಲ್ಲಿ  ತೃಣಮೂಲ ಕಾಂಗ್ರೆಸ್ ನಾಯಕನನ್ನು  ಅಪರಿಚಿತ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Advertisement

ಮೃತ ವ್ಯಕ್ತಿಯನ್ನು  ಬಾಸುದೇಬ್ ಮೊಂಡಾಲ್ ಎಂದು ಗುರುತಿಸಲಾಗಿದ್ದು, ಬಾಕ್ಚ ಗ್ರಾಮದ ಮಾಜಿ ಪಂಚಾಯಿತಿ ಅಧ್ಯಕ್ಷರಾಗಿದ್ದರು.

ಸೋಮವಾರ ರಾತ್ರಿ ಘಟನೆ ನಡೆದಿದ್ದು ತಮ್ಮ  ಮಗಳ ಮನೆಯಿಂದ ಹಿಂದಿರುಗುತ್ತಿದ್ದ ವೇಳೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆಗೈದಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಾರದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದ್ದು , ಭಾನುವಾರ ಸ್ಥಳೀಯ ಬಿಜೆಪಿ ಮುಖಂಡ ಹರಾಲ ದೇಬ್ ನಾಥ್ ರನ್ನು ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದರು. ವಾರದ ಹಿಂದೆ ಬೊಂದು ಪ್ರಕಾಶ್ ಪಾಲ್ , ಆತನ ಗರ್ಭಿಣಿ ಪತ್ನಿ ಮತ್ತು 6 ವರ್ಷದ ಮಗನನ್ನು ಮುರ್ಷಿದಾಬಾದ್ ನಲ್ಲಿ ಬರ್ಬರವಾಗಿ ಕೊಲೆಗೈಯಲಾಗಿತ್ತು.

ಕಳೆದ ಮೂರು ತಿಂಗಳಲ್ಲಿ ಪಶ್ಚಿಮ ಬಂಗಾಳದ 8 ಬಿಜೆಪಿ ಕಾರ್ಯಕರ್ತರನ್ನು  ಸರಣಿ ಹತ್ಯೆ ಮಾಡಲಾಗಿತ್ತು ಎಂದು ಬಿಜೆಪಿ ಇದೇ ವೇಳೆ ಅರೋಪಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next