Advertisement

#Chaiwala ; ಮಂಗಳ..ಶುಕ್ರ ಗ್ರಹಗಳಲ್ಲಿ ಅಂಗಡಿ : ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್

05:45 PM Aug 24, 2023 | Team Udayavani |

ಬೆಂಗಳೂರು: ಚಂದ್ರಯಾನ 3  ವಿಚಾರದಲ್ಲಿ ಮಲಯಾಳಿ ಚಾಯ್ ವಾಲಾ ಫೋಟೋ ಸಹಿತ ಟ್ವೀಟ್ ಮಡಿದ ಬಳಿಕ ಖ್ಯಾತ ನಟ ಪ್ರಕಾಶ್ ರಾಜ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಗುರುವಾರ ಮತ್ತೊಂದು ಟ್ವೀಟ್ ಮಾಡಿ ಟೀಕಾಕಾರರಿಗೆ ಹಾಸ್ಯಾಸ್ಪದರೆ..ಎಂದು ಕರೆದಿದ್ದಾರೆ.

Advertisement

”ಮಲಯಾಳಿ ಚಾಯ್ ವಾಲಾ ಎಲ್ಲಿ ಎಂದು ಇನ್ನೂ ಬಡಬಡಿಸುತ್ತಿರುವ.. ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೆ..ಅವನು ಬುದ್ದಿವಂತ …ಆತನೀಗ ಮಂಗಳ .. ಶುಕ್ರ ಗ್ರಹಗಳಲ್ಲಿ ಅಂಗಡಿಯಿಟ್ಟಿದ್ದಾನೆ .. ಸಾಧ್ಯವಾದರೆ ಹೋಗಿ” ಎಂದು ಟ್ವೀಟ್ ಮಾಡಿದ್ದಾರೆ.

#ArrestPrakashRaj ಟ್ವಿಟರ್‌ ನಲ್ಲಿ ಟ್ರೆಂಡ್‌ ಆಗಿರುವ ವೇಳೆಯಲ್ಲೇ ನಟ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಬುಧವಾರ ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿಳಿದಿದ್ದು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು.ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. ಧನ್ಯವಾದಗಳು ಇಸ್ರೋ. ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು….ಸಂಭ್ರಮಿಸಲು .. ಇದು ದಾರಿಯಾಗಲಿ” ಎಂದು ಟ್ವೀಟ್ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next