Advertisement

ಬದುಕಿಗೆ ಅರ್ಥ ಕಲ್ಪಿಸಲು ದೇಶವೇ ಪರಮೋಚ್ಛ ಎಂದು ಭಾವಿಸಿ: ರಾಜ್ಯಪಾಲ ಗೆಹ್ಲೋಟ್

07:59 PM Nov 20, 2022 | |

ಬೆಂಗಳೂರು: ಬದುಕಿಗೆ ಅರ್ಥ ಕಲ್ಪಿಸಲು, ಸಾಮಾಜಿಕ ಅಸಮಾನತೆ, ಅನಿಷ್ಟ ಪದ್ಧತಿ, ವ್ಯಸನಗಳಿಂದ ದೂರವಿದ್ದು, ದೇಶವೇ ಪರಮೋಚ್ಛ ಎಂದು ಭಾವಿಸಿ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಕರೆ ನೀಡಿದರು.

Advertisement

ನಗರದ ಯವನಿಕಾ ಸಂಭಾಂಗಣದಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಸಂಘಟನೆ ವತಿಯಿಂದ ಆಯೋಜಿಸಿದ್ದ 14ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದಿಂದ ಧಾರ್ಮಿಕ, ಸಾಂಸ್ಕೃತಿಕ, ಪ್ರಾಕೃತಿಕ ಮತ್ತು ಭೌಗೋಳಿಕ ಮಾಹಿತಿಯೊಂದಿಗೆ ನೋಡುವ, ಕೇಳುವ, ಓದುವ ಮತ್ತು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ನಾವು ಪರಸ್ಪರ ಅರ್ಥಮಾಡಿಕೊಳ್ಳಲು ಮತ್ತು ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಪಡೆಯುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಛತ್ತೀಸ್ ಗಡ, ಜಾರ್ಖಂಡ್ , ಒಡಿಶಾ ಹಾಗೂ ಬಿಹಾರ ರಾಜ್ಯಗಳ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದಿದ ಕರ್ನಾಟಕ ರಾಜ್ಯದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಉಡುಗೆ, ಆಹಾರ ಮತ್ತು ಇತರ ಅಂಶಗಳನ್ನು ಪರಿಚಯಿಸಿಕೊಳ್ಳುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಪ್ರಧಾನ ಮಂತ್ರಿಗಳ ಚಿಂತನೆಯು “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್” ಆಗಿದೆ. ಈ ಚಿಂತನೆಯೊಂದಿಗೆ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ನಿರ್ಧರಿಸಲಾಗಿದೆ. ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿವೆ. ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ದೇಶದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಮತ್ತು ಈಗಿನ ರಾಷ್ಟ್ರಪತಿ ಗೌರವಾನ್ವಿತ ದ್ರೌಪದಿ ಮುರ್ಮು ಅವರ ಬಾಲ್ಯದ ಬಡತನದಿಂದ ಬಂದವರು. ಆದರೆ ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಅವರು ದೇಶದ ಅತ್ಯುನ್ನತ ಸ್ಥಾನವನ್ನು ತಲುಪಿದರು. ಅವರ ಜೀವನ ಪರಿಚಯದಿಂದ ನೀವು ಸ್ಫೂರ್ತಿ ಪಡೆಯಬಹುದು ಎಂದರು.

Advertisement

ಹವಾಮಾನ ಬದಲಾವಣೆ ಇಂದು ಜಾಗತಿಕ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು, ನಾವು ಪರಿಸರ ಸಂರಕ್ಷಣೆಗಾಗಿ ಮರಗಳನ್ನು ನೆಡಬೇಕು, ಮರಗಳನ್ನು ಕಡಿಯದಂತೆ ಉಳಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ನಿಮ್ಮ ಪಾತ್ರ ಮಹತ್ವದ್ದು. ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ ಮೂಲಕ, ಕೌಶಲ್ಯ ಅಭಿವೃದ್ಧಿ ಮತ್ತು ಕೈಗಾರಿಕೆ, ಹೊಸ ತಂತ್ರಜ್ಞಾನ, ತಂತ್ರಜ್ಞಾನ, ತಜ್ಞರನ್ನು ಆಲಿಸಿ, ವೃತ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯುವುದು, ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮತ್ತು ಅದರ ಸಾಂಸ್ಕೃತಿಕ ಮತ್ತು ಭೌಗೋಳಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದು. ಪರಿಚಯ ಮಾಡಿಕೊಳ್ಳುವ ಅವಕಾಶ ಸಿಗಲಿದೆ. ಈ ಮಾಹಿತಿಯು ನಿಮ್ಮ ಒಟ್ಟಾರೆ ಅಭಿವೃದ್ಧಿಯಲ್ಲಿ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಸಹಾಯಕವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next