Advertisement

ಮಿತ್ರಕಾಲದಲ್ಲಿ ಪ್ರಜಾಪ್ರಭುತ್ವ ಉಳಿಸಲು ಹೋರಾಟ : ಜಾಮೀನು ಸಿಕ್ಕ ಬಳಿಕ ರಾಹುಲ್

06:56 PM Apr 03, 2023 | Team Udayavani |

ಸೂರತ್ : ಮೋದಿ ಉಪನಾಮದ ಬಗ್ಗೆ 2019 ರ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ಜಾಮೀನು ಪಡೆದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಮಿತ್ರಕಾಲದಲ್ಲಿ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Advertisement

‘ಮಿತ್ರಕಾಲ’ದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಇದಾಗಿದೆ.ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ!’ ಎಂದು ಟ್ವೀಟ್ ಮಾಡಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಸೂರತ್‌ನ ಸೆಷನ್ಸ್ ನ್ಯಾಯಾಲಯ ಸೋಮವಾರ ಎಪ್ರಿಲ್ 13 ರವರೆಗೆ ಜಾಮೀನು ವಿಸ್ತರಿಸಿದೆ ಮತ್ತು ಮೇ 3 ರಂದು ಶಿಕ್ಷೆಯ ವಿರುದ್ಧದ ಅವರ ಮನವಿಯನ್ನು ಆಲಿಸಲು ಒಪ್ಪಿಕೊಂಡಿದೆ.

ಭಾರತದ ಜನರ ಪ್ರಜಾಸತ್ತಾತ್ಮಕ ಧ್ವನಿಯನ್ನು ರಕ್ಷಿಸಲು ನಾನು ಇಲ್ಲಿದ್ದೇನೆ ಎಂದು ಕೋರ್ಟ್ ಗೆ ಆಗಮಿಸಿದ್ದ ವೇಳೆ ರಾಹುಲ್ ಹೇಳಿಕೆ ನೀಡಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next