Advertisement

ವೈದ್ಯಾಧಿಕಾರಿಗಳ ಪ್ರತಿಭಟನೆ 3ನೇ ದಿನಕ್ಕೆ

01:31 AM Sep 18, 2020 | mahesh |

ಮಂಗಳೂರು/ಉಡುಪಿ: ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ವೈದ್ಯಾಧಿಕಾರಿಗಳ ಸಂಘ ಹಮ್ಮಿಕೊಂಡಿರುವ ಪ್ರತಿಭಟನೆಯು ಗುರುವಾರ 3ನೇ ದಿನಕ್ಕೆ ಕಾಲಿಟ್ಟಿದೆ. ದ.ಕ. ಜಿಲ್ಲೆಯಲ್ಲಿ ವೈದಕೀಯ ವಿಚಾರಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನೂ 3ನೇ ದಿನವೂ ಇಲ್ಲಿನ ವೈದ್ಯಾಧಿಕಾರಿಗಳು ತಡೆ ಹಿಡಿದು ತಮ್ಮ ಅಸಹಕಾರವನ್ನು ವ್ಯಕ್ತಪಡಿಸಿದರು.

Advertisement

ಜಿಲ್ಲೆಯಲ್ಲಿ ಸರಕಾರಕ್ಕೆ ಸಲ್ಲಿಸಬೇಕಾದ ಯಾವುದೇ ವರದಿಗಳನ್ನು ಗುರುವಾರ ಸರಕಾರಿ ವೈದ್ಯಾಧಿಕಾರಿಗಳು ಸಲ್ಲಿಸಲಿಲ್ಲ. ಕೋವಿಡ್‌-19 ರೋಗಿಗಳಿಗೆ ಸಂಬಂಧಿಸಿದ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ.

ಇಂದು ಸಭೆ
ವೈದ್ಯಾಧಿಕಾರಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಚರ್ಚಿಸುವ ಸಲುವಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಸೆ. 18ರಂದು ವೈದ್ಯಾಧಿಕಾರಿಗಳ ಸಭೆ ಕರೆದಿದ್ದಾರೆ. ಈ ವೇಳೆ ಭರವಸೆ ಈಡೇರಿಸುವ ನಿರೀಕ್ಷೆ ಇದ್ದು, ಕಾದು ನೋಡಬೇಕಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next