Advertisement

ಜಿಲ್ಲೆಯಲ್ಲಿ ತಂಬಾಕು ಉತ್ಪನ್ನ ಮಾರಾಟ-ಬಳಕೆ ನಿಷೇಧ

05:26 AM May 21, 2020 | Suhan S |

ವಿಜಯಪುರ: ಕೋವಿಡ್‌-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ ಮಾರಾಟ ಹಾಗೂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶದನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‌ ಮಸಾಲಾ, ಜರ್ದಾ ಸೇರಿದಂತೆ ಎಲ್ಲ ರೀತಿಯ ತಂಬಾಕು ಉತ್ಪನ್ನ ಮಾರಾಟ ಹಾಗೂ ತಂಬಾಕು ಉತ್ಪನ್ನ ಸೇವಿಸಿ ಉಗುಳುವುದನ್ನು ನಿಷೇಧಿಸಲಾಗಿದೆ.

Advertisement

ತಂಬಾಕು ಸೇವನೆಯಿಂದ ಕ್ಷಯರೋಗ, ನಿಮ್ಯೋನಿಯಾ, ಕೋವಿಡ್‌-19 ನಂಥ ರೋಗಗಳ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡಲು ಕಾರಣವಾಗುತ್ತವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ ಮಾರಾಟ ಹಾಗೂ ಸಾರ್ವಜನಿಕರು ಬಳಸುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.

ಅದರಂತೆ ಬೀಡಿ, ಸಿಗರೇಟ್‌ ಸೇದುವುದರಿಂದಲೂ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹ ಸೇರುತ್ತವೆ. ಇದರಿಂದ ದೇಹದ ಇತರೆ ಭಾಗಗಳಿಗೂ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆ ಉಂಟು ಮಾಡುತ್ತವೆ. ಹೀಗಾಗಿ ಜಿಲ್ಲೆಯಾದ್ಯಂತ ತಂಬಾಕು, ಪಾನ್‌ ಮಸಾಲಾ, ಜರ್ದಾ, ಖೈನಿ ಉತ್ಪನ್ನ ಮಾರಾಟ ನಿಷೇ ಧಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next