Advertisement

Today ಬಳ್ಳಾರಿ ಸೆಂಟ್ರಲ್‌ ಜೈಲು ದರ್ಶನ; ಪರಪ್ಪನ ಅಗ್ರಹಾರದಿಂದ ಬಿಗಿಭದ್ರತೆಯಲ್ಲಿ ಸ್ಥಳಾಂತರ

01:29 AM Aug 29, 2024 | Team Udayavani |

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮತ್ತು ಆತನ ಸಂಗಡಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಈ ಬೆನ್ನಲ್ಲೇ ಗುರುವಾರ ದರ್ಶನ್‌ನನ್ನು ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

Advertisement

ನ್ಯಾಯಾಂಗ ಬಂಧನ ಅವಧಿ ಮುಕ್ತಾಯ ಹಾಗೂ ಪ್ರಕರಣಗಳ ವಿಚಾರಣೆ ಹಿನ್ನೆಲೆಯಲ್ಲಿ ಬುಧವಾರ ಸ್ಥಳಾಂತರಿ ಸಲು ಸಾಧ್ಯವಾಗಿಲ್ಲ. ಆದರೆ ಗುರುವಾರ ಬೆಳಗ್ಗೆಯೇ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಗುತ್ತದೆ. ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆರ್‌. ಹಿತೇಂದ್ರ ಸಂಬಂಧಪಟ್ಟ ಜಿಲ್ಲೆಯ ಎಲ್ಲ ಎಸ್‌ಪಿಗಳ ಜತೆ ಸಭೆ ನಡೆಸಿ ಮಾರ್ಗದುದ್ದಕ್ಕೂ ಹೆಚ್ಚುವರಿ ಭದ್ರತೆ ನೀಡುವಂತೆ ಸೂಚಿಸಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್‌ ಸಿಬಂದಿ ಜತೆಗೆ ಬಿಗಿಭದ್ರತೆಯಲ್ಲಿ ಕರೆದೊಯ್ಯಲಾಗುತ್ತದೆ. ಎಲ್ಲೆಡೆಯೂ ಸಿಗ್ನಲ್‌ ಫ್ರೀ ಮಾಡಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ದರ್ಶನ್‌ ಸೇರಿ ಎಲ್ಲ ಆರೋಪಿಗಳನ್ನು ಬುಧವಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ್ದು ಎಲ್ಲರಿಗೆ ಸೆ. 9ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಸೆಲ್‌ ನಂ. 15
ಬಳ್ಳಾರಿ ಜೈಲಿನ ಸೆಲ್‌ ನಂ. 15ರಲ್ಲಿ ದರ್ಶನ್‌ನನ್ನು ಇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲಿ ನೀರು, ಪ್ರತ್ಯೇಕ ಶೌಚಾಲಯ ಸೌಲಭ್ಯವಿದೆ.

Advertisement

Udayavani is now on Telegram. Click here to join our channel and stay updated with the latest news.

Next