Advertisement

ಇಂದಿನಿಂದ ಪ್ರಚಾರ ಅಖಾಡಕ್ಕೆ ಸಿಎಂ

06:00 AM Oct 26, 2018 | |

ಬೆಂಗಳೂರು: ಉಪ ಚುನಾವಣೆ ಪ್ರಚಾರ “ಅಖಾಡ’ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರದಿಂದ ಇಳಿಯಲಿದ್ದಾರೆ. ಐದೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಆರಂಭಕ್ಕೆ ಮುನ್ನ ಗುರುವಾರ ಮುಖ್ಯಮಂತ್ರಿಯವರು ಆರೋಗ್ಯ ತಪಾಸಣೆ ಸಹ ಮಾಡಿಸಿಕೊಂಡಿದ್ದಾರೆ

Advertisement

ಶುಕ್ರವಾರ ಹಾಗೂ ಶನಿವಾರ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಪರ ಪ್ರಚಾರ ನಡೆಸಲಿದ್ದಾರೆ.

ಕುಮಾರಸ್ವಾಮಿ, ಒಂದು ವಾರ ಕಾಲ ನಿರಂತರ ಪ್ರವಾಸ ನಡೆಸಿ ಮಂಡ್ಯ, ಶಿವಮೊಗ್ಗ, ಬಳ್ಳಾರಿ,ಜಮಖಂಡಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.

ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ಜಂಟಿ ಪ್ರಚಾರದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಲಂಡನ್‌ ಪ್ರವಾಸದಲ್ಲಿರುವ ಎಚ್‌.ಡಿ.ದೇವೇಗೌಡರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next