Advertisement

ಕೋವಿಡ್ : ರಾಜ್ಯದಲ್ಲಿಂದು 451 ಹೊಸ ಪ್ರಕರಣ | 1455 ಸೋಂಕಿತರು ಗುಣಮುಖ

09:24 PM Oct 09, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಶನಿವಾರ 451 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ 1455 ಮಂದಿ ಗುಣಮುಖರಾಗಿದ್ದಾರೆ.

Advertisement

ಕೋವಿಡ್ ಸೋಂಕು ಪರೀಕ್ಷೆಗಳು 1.2 ಲಕ್ಷ ನಡೆದಿದ್ದು, ಪಾಸಿಟಿವಿಟಿ ದರ ಶೇ.0.4ರಷ್ಟು, ಮರಣ ದರ ಶೇ.2 ರಷ್ಟಿದೆ. ಸತತ ಎರಡನೇ ದಿನ 500ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಇನ್ನು ಸಕ್ರಿಯ ಸೋಂಕು ಪ್ರಕರಣಗಳು 10 ಸಾವಿರ ಆಸುಪಾಸಿಗೆ ತಗ್ಗಿವೆ.

ಶನಿವಾರ ಅತಿ ಹೆಚ್ಚು ಬೆಂಗಳೂರು ನಗರ 187 ಪ್ರಕರಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ 50 ಕ್ಕಿಂತ ಕಡಿಮೆ ಇವೆ.

ಬಾಗಲಕೋಟೆ, ಹಾವೇರಿ, ಕಲಬುರಗಿ, ಯಾದಗಿರಿ, ವಿಜಯಪುರದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಇನ್ನು 9 ಸಾವಿನ ಪೈಕಿ ಬೆಂಗಳೂರು ನಗರದಲ್ಲಿ 3, ತುಮಕೂರು 2, ಉತ್ತರ ಕನ್ನಡ, ಹಾಸನ, ದಾವಣಗೆರೆ ಹಾಗೂ ಧಾರವಾಡದಲ್ಲಿ ತಲಾ 1 ಸಾವು ವರದಿಯಾಗಿದೆ.

ಇದನ್ನೂ ಓದಿ:ವಿದೇಶ ಪ್ರವಾಸ,ಅಲ್ಲೇ ಸೆಟ್ಲ್ ಆಗ್ತೀರಾ? : 24 ಲಕ್ಷದವರೆಗೆ ಆರ್ಥಿಕ ಪ್ರೋತ್ಸಾಹವೂ ಇದೆ!

Advertisement
Advertisement

Udayavani is now on Telegram. Click here to join our channel and stay updated with the latest news.

Next