Advertisement

ಇಂದು ಡಿಕೆಶಿ ಅರ್ಜಿ ವಿಚಾರಣೆ: ಸಿಗಬಹುದೇ ಜಾಮೀನು?

09:50 AM Oct 15, 2019 | Team Udayavani |

ಹೊಸದಿಲ್ಲಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ.

Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.

ಸೋಮವಾರ ಬೆಳಿಗ್ಗೆ ದೆಹಲಿ ಉಚ್ಛ ನ್ಯಾಯಾಲಯದ ಎದುರು ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಮಾಜಿ ಸಚಿವರ ಪರ ಮೂರು ಹಿರಿಯ ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಒಂದು ವೇಳೆ ಇಂದು ಹೈಕೋರ್ಟ್ ನಲ್ಲಿ ಜಾಮೀನು ದೊರಕದೆ ಇದ್ದಲ್ಲಿ, ಡಿ ಕೆ ಶಿವಕುಮಾರ್ ಅವರು ನಾಳೆ ( ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರಾಗಬೇಕಾಗಿದೆ. ಅಲ್ಲಿ ಮೂರನೇ ಅವಧಿಗೆ ನ್ಯಾಯಾಂಗ ಬಂಧನ ವಿಸ್ತರಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next