Advertisement

ಇಂದು ಡಾ|ಹೆಗ್ಗಡೆ 74ನೇ ಜನ್ಮದಿನಾಚರಣೆ

01:16 AM Nov 25, 2021 | Team Udayavani |

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ 74ನೇ ಜನ್ಮ ದಿನಾಚರಣೆ ಗುರುವಾರ ಅವರ ನಿವಾಸದಲ್ಲಿ ಸರಳವಾಗಿ ನೆರವೇರಲಿದೆ.

Advertisement

ದೇಗುಲದ ನೌಕರರು, ನಾಗರಿಕರು, ಶಿಕ್ಷಣ ಸಹಿತ ವಿವಿಧ ಸಂಸ್ಥೆಗಳ ಸಿಬಂದಿ ಶುಭಾಶಯ ಸಲ್ಲಿಸಲಿದ್ದಾರೆ.

ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರರಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ 1968ರ ಅ. 24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು.

ಇದನ್ನೂ ಓದಿ:ಕೋವಿಡ್ ಸೋಂಕು ಪರೀಕ್ಷೆ ಕಡಿಮೆಯಾಗಿದೆ; 13 ರಾಜ್ಯಗಳಿಗೆ ಕೇಂದ್ರದ ಮುನ್ನೆಚ್ಚರಿಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ ತರಬೇತಿ ಕೇಂದ್ರಗಳು, ಕೆಜಿಯಿಂದ ಪಿಜಿ ವರೆಗಿನ ಶಿಕ್ಷಣ ಸಂಸ್ಥೆಗಳು, ವೃತ್ತಿಶಿಕ್ಷಣ ಸಂಸ್ಥೆಗಳು, ಉಜಿರೆ ಮಂಗಳೂರು, ಮೈಸೂರು, ಧಾರವಾಡ, ಬೆಂಗಳೂರು, ಹಾಸನ, ಉಡುಪಿಯಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ಕ್ರೀಡೆ, ಸಾಂಸ್ಕೃತಿಕ ರಂಗ, ಪರೀಕ್ಷಾ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲೇ ವಿಶೇಷ ಮನ್ನಣೆ ಮತ್ತು ಗೌರವಕ್ಕೆ ಪಾತ್ರವಾಗುವಂತೆ ಶೈಕ್ಷಣಿಕ ಕ್ಷೇತ್ರವನ್ನು ಬೆಳೆಸಿದ ಹೆಗ್ಗಳಿಕೆ ಅವರದು.

Advertisement
Advertisement

Udayavani is now on Telegram. Click here to join our channel and stay updated with the latest news.

Next