Advertisement

ನೋಟು ಅಮಾನ್ಯಕ್ಕೆ 2 ವರ್ಷ;ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

06:27 PM Nov 08, 2018 | Sharanya Alva |

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500 ರೂ. ಮತ್ತು 1000 ರೂ.ಮುಖಬೆಲೆಯ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆರ್ ಬಿಐ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

Advertisement

ನೋಟು ಅಮಾನ್ಯೀಕರಣ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಆರ್ ಬಿಐ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡು ಬಿಡುಗಡೆಗೊಳಿಸಿದ್ದರು.

ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ, ಅಣಕು ಶವಯಾತ್ರೆಯ ಮೆರವಣಿಗೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಎಂದು ನೋಟು ಅಮಾನ್ಯೀಕರಣ ಮಾಡಿ ದೇಶದ ಜನಸಾಮಾನ್ಯರು ತೊಂದರೆ ಅನುಭವಿಸುವಂತೆ ಮಾಡಿದ್ದರು. ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ನೋಟು ನಿಷೇಧ ಮಾಡಿ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬೀಳುವಂತೆ ಮಾಡಿದರು ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಬಸವಗೌಡ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next